ಸಂತ ಸೇವಾಲಾಲ್ ದೇವಾಲಯಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿ ಭೇಟಿ
1 min readದಾವಣಗೆರೆ: ಜುಲೈ 15ರಂದು ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಭಾಯಾಗಡದ ಸಂತ ಸೇವಾಲಾಲ್ ದೇವಾಲಯಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿ ಭೇಟಿ ನೀಡಲಿದ್ದು, ಲಂಬಾಣಿ ಸಮಾಜದ ಧರ್ಮಗುರುಗಳು ಹಾಗೂ ಮುಖಂಡ ರೊಂದಿಗೆ ಸಂವಾದ ನಡೆಸಲಿದ್ದಾರೆ . ಮಾಜಿ ಸಚಿವ ಬಾಬುರಾವ್ ಚವಾಣ್ ತಿಳಿಸಿದರು.
ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ. ನಂತರ ಸಂವಾದದ ಸಮುದಾಯದವರು ವಲಸೆ ಹೋಗುತ್ತಿರುವುದು, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಹೋರಾಟ ಸೇರಿ ಸಮುದಾಯದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ.
ಇದು ರಾಜಕೀಯೇತರ ಕಾರ್ಯಕ್ರಮವಾಗಿದ್ದು, ಎಲ್ಲ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಸಮುದಾಯದವರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿಕೊಂಡರು.
ತಾಂಡಾಗಳು ಇನ್ನು ಸಂಪೂರ್ಣವಾಗಿ ಕಂದಾಯ ಗ್ರಾಮಗಳಾಗಿಲ್ಲ. ಇದರಿಂದ ಮೂಲಸೌಲಭ್ಯದಿಂದ ವಂಚಿತರಾಗಿದರೆ. ಸರ್ಕಾರ ಶೀಘ್ರ ಎಲ್ಲ ಲಂಬಾಣಿ ತಾಂಡಾಗಳು ಕಂದಾಯ ಗ್ರಾಮಗಳಾಗಿ ಘೋಷಿಸಬೇಕು. ಈ ಬಗ್ಗೆ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು.
‘ಸದಾಶಿವ ಆಯೋಗ ವರದಿ ಜಾರಿಗೆ ಸಮುದಾಯದ ವಿರೋಧ ಇದೆ. ಸಮಾಜದವರಿಗೆ ಮೀಸಲಾತಿ ಸಿಗುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದು ಹೇಳಿದರು.ಮಾಜಿ ಸಚಿವ ಮನೋಹರ ಐನಾಪುರ ಮಾತನಾಡಿ, ‘ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಡಿ.ಕೆ.ಶಿವಕುಮಾರ್ ಬರುತ್ತಿಲ್ಲ. ಪಕ್ಷಾತೀತವಾಗಿ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ತಾಂಡಾಗಳ ಸಮಸ್ಯೆಗಳನ್ನು ಆಲಿಸಲು ಬರುತ್ತಿದ್ದಾರೆ’ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ನಂಜಾನಾಯ್ಕ್,ಇದ್ದರು.