May 1, 2024

Chitradurga hoysala

Kannada news portal

*ಪೌರ ಕಾರ್ಮಿಕರ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಿ: ಹೆಚ್ ಹನುಮಂತಪ್ಪ*

1 min read

*ಪೌರ ಕಾರ್ಮಿಕರ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಿ: ಹೆಚ್ ಹನುಮಂತಪ್ಪ* _________________

ಯಾದಗಿರಿ: ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಅಧಿಕಾರಿಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಸಫಾಯಿ ಕರ್ಮಚಾರಿ ನಿಗಮದ ಅಧ್ಯಕ್ಷ ಹೆಚ್ ಹನುಮಂತಪ್ಪ.
ಸಭೆಯಲ್ಲಿ ಅಧಿಕಾರಿಗಳಿಂದ ಸಫಾಯಿ ಕರ್ಮಚಾರಿಗಳ ಏಳಿಗೆಗಾಗಿ ಕೈಕೊಂಡ ಯೋಜನೆ ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯಲಾಯಿತು . ಬಳಿಕ ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳನ್ನು ನೇರಪಾವತಿಯಲಿ ಉದ್ಯೋಗಕ್ಕೆ ತೆಗೆದುಕೊಳ್ಳಬೇಕು. ಗೃಹಭಾಗ್ಯ ಯೋಜನೆಯಲ್ಲಿ ನಿರ್ಮಿಸುತ್ತಿರುವ ವಸತಿ ಕಾಮಗಾರಿಯನ್ನು ಶೀಘ್ರ ಮುಗಿಸಿ ಅರ್ಹರಿಗೆ ನೀಡಲು ಕ್ರಮವಹಿಸಬೇಕು. ಜತೆಗೆ ಕಾರ್ಮಿಕರಿಗೆ ಸುರಕ್ಷತಾ ಪರಿಕರ, ಬೆಳಗಿನ ಉಪಹಾರ, ವೇತನ, ಆರೋಗ್ಯ ತಪಾಸಣೆ, ಹಾಗೂ ಇತರ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು .

ಈ ವೇಳೆ ಜಿಪಂ ಸಿಇಒ  ಶಿಲ್ಪಾ ಶರ್ಮ, ಎಡಿಸಿ ಶಂಕರ್ ಗೌಡ ಸೋಮನಾಳ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪೂಜಾರಿ ಹಾಗೂ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

About The Author

Leave a Reply

Your email address will not be published. Required fields are marked *