*ಇಂಧನ, ಅಗತ್ಯ ವಸ್ತಗಳ ಬೆಲೆ ಏರಿಕೆಗೆ ಖಂಡನೆ*ಎಚ್.ಟಿ.ಹನುಮಂತಪ್ಪ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಸಮಿತಿ
1 min read*ಇಂಧನ, ಅಗತ್ಯ ವಸ್ತಗಳ ಬೆಲೆ ಏರಿಕೆಗೆ ಖಂಡನೆ*
ನಾಳೆ ಹೊಳಲ್ಕೆರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ – ಸೈಕಲ್ ಜಾಥಾ, ಪಾದಯಾತ್ರೆ
ನಮಗೆ ಅಧಿಕಾರ ಕೊಟ್ಟರೆ ದೇಶದ ಚಿತ್ರಣವನ್ನೇ ಬದಲಾಯಿಸುತ್ತೇವೆ ಎಂದು ಸುಳ್ಳು ಭಾಷಣದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇಂಧನ ಸೇರಿದಂತೆ ಅಗತ್ಯ ವಸ್ತುಗಳನ್ನು ಗಗನಕ್ಕೆ ಏರಿಸುವ ಮೂಲಕ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಇದರ ವಿರುದ್ಧ ಹೊಳಲ್ಕೆರೆ ನಗರದಲ್ಲಿ ಜುಲೈ .17 ರಂದು ಶನಿವಾರ ಮಧ್ಯಾಹ್ನ 2.30 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪಟ್ಟಣದ ಕುಕ್ಕುವಾಡೇಶ್ವರಿ ದೇವಸ್ಥಾನದ ಬಳಿ ಮಾಜಿ ಸಚಿವ ಶ್ರೀ ಹೆಚ್.ಆಂಜನೇಯ ಅವರ ನೇತೃತ್ವದಲ್ಲಿ ಆರಂಭವಾಗುವ ಸೈಕಲ್ ಜಾಥಾ, ಪಾದಯಾತ್ರೆಯಲ್ಲಿ ಕೆಪಿಸಿಸಿ ವೀಕ್ಷಕರಾಗಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಮಾಜಿ ಸಚಿವ ನಜೀರ್ ಅಹ್ಮದ್, ಮೋಹನ್ಬಾಬು, ನಾಗರಾಜ್ ಪಾಲ್ಗೊಳ್ಳಲಿದ್ದಾರೆ.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕರಾದ ಎ.ವಿ.ಉಮಾಪತಿ, ಬಿ.ಜಿ.ಗೋವಿಂದಪ್ಪ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ ಎಂ.ಕೆ.ತಾಜ್ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ ಇತರ ಮುಖಂಡರು ಭಾಗವಹಿಸಲಿದ್ದಾರೆ.
ಸೈಕಲ್ ಜಾಥಾ, ಪಾದಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಒಂಟಿಕಂಬದ ಆವರಣ ತಲುಪಲಿದ್ದು, ಅಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಪ್ರಮುಖ ಮುಖಂಡರು ಮಾತನಾಡಲಿದ್ದಾರೆ.
ಜನವಿರೋಧಿ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು, ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಭಾರತೀಯ ಜನತಾಪಕ್ಷದ ದುರಾಡಳಿತವನ್ನು ಖಂಡಿಸಿ, ಜನರ ಹಿತ ಕಾಪಾಡಬೇಕೆಂದು ವಿನಂತಿಸಿಕೊಳ್ಳುತ್ತೇನೆ.ಎಂದು
ಎಚ್.ಟಿ.ಹನುಮಂತಪ್ಪ
ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಸಮಿತಿ,ಹೊಳಲ್ಕೆರೆ. ಇವರು ಪತ್ರಿಕೆ ಗೆ ತಿಳಿಸಿದರು.