ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಿಯೋಜಿತ ಬ್ಲಾಕ್ ಅಧ್ಯಕ್ಷ ಲಕ್ಷ್ಮಿಕಾಂತ್ ಅಧ್ಯಕ್ಷತೆಯಲ್ಲಿ ಸಭೆ
1 min read
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಿಯೋಜಿತ ಬ್ಲಾಕ್ ಅಧ್ಯಕ್ಷ ಲಕ್ಷ್ಮಿಕಾಂತ್ ಅಧ್ಯಕ್ಷತೆಯಲ್ಲಿ ಸಭೆ
ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೂತನ ನಿಯೋಜಿತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಿಕಾಂತ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು .ಸಭೆಯಲ್ಲಿಮಾತನಾಡಿದ ಕಾಂಗ್ರೆಸ್ ಮುಖಂಡ ಕೆಪಿಸಿಸಿ ಸದಸ್ಯರಾದ ಹನುಮಲಿ ಷಣ್ಮುಖಪ್ಪ ಮಾತನಾಡಿ ಮುಂದಿನ ದಿನಮಾನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಆದ್ದರಿಂದ ಜಿಲ್ಲೆಯ ಮುಂಚೂಣಿ ಘಟಕಗಳ ನಾಯಕರುಗಳು ಪಕ್ಷ ಸಂಘಟನೆ ಬಗ್ಗೆ ಒತ್ತುಕೊಟ್ಟು ಮುಂದಿನ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯಗಳನ್ನು ಮಾಡಬೇಕೆಂದು ಕರೆ ನೀಡಿದರು. ನೂತನವಾಗಿ ನಿಯೋಜಿತ ಬ್ಲಾಕ್ ಅಧ್ಯಕ್ಷ ಲಕ್ಷ್ಮಿಕಾಂತ್ ಮಾತನಾಡಿ ಕೆಪಿಸಿಸಿ ಸದಸ್ಯ ಹನುಮಲಿ ಷಣ್ನುಖಪ್ಪ ನವರ ಮತ್ತು ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿಗೆ ನಾವು ಶ್ರಮಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಪ್ರಕಾಶ್ ಪ್ರಧಾನ ಕಾರ್ಯದರ್ಶಿ ಗಳಾದ ಮೈಲಾರಪ್ಪ ಶಬ್ಬೀರ್ ಭಾಷಾ ಕಾಂಗ್ರೆಸ್ಸಿನ ಹಿರಿಯ ಮುಖಂಡ ಮಹಮದ್ ಬಾಷಾ ಸರ್ದಾರ್ ನಗ ಸಮಾಜಿ ಅಧ್ಯಕ್ಷ ಮಂಜಪ್ಪ ಮಾಜಿ ನಗರಸಭಾ ಸದಸ್ಯ ಕಾಂಗ್ರೆಸ್ನ ಜಿಲ್ಲಾ ಕಾರ್ಯದರ್ಶಿ ಕುಮಾರ್ ನಗರಸಭಾ ಸದಸ್ಯರುಗಳಾದ ಮೀನಾಕ್ಷಿ ವೆಂಕಟೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.