April 29, 2024

Chitradurga hoysala

Kannada news portal

ಸರ್ಕಾರಿ ನೌಕರರಿಗೆ ಶೇ.11 ತುಟ್ಟಿಭತ್ಯೆ ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…

1 min read

ಸರ್ಕಾರಿ ನೌಕರರಿಗೆ ಶೇ.11 ತುಟ್ಟಿಭತ್ಯೆ ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…

ಚಿತ್ರದುರ್ಗ:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಸರ್ಕಾರಿ ನೌಕರರಿಗೆ ಶೇ.11 ತುಟ್ಟಿಭತ್ಯೆ ಘೋಷಣೆ ಮಾಡುವ ಮೂಲಕ ಸರ್ಕಾರಿ ನೌಕರರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿಗಳ ತುಟ್ಟಿಭತ್ಯೆ ಘೋಷಣೆ ಮಾಡಿರುವುದಕ್ಕೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಮಂಜುನಾಥ್ ಮತ್ತಿತರರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕೋವಿಡ್-19ನಿಂದಾಗಿ 2020ರ ಜನವರಿಯಿಂದ ತಡೆಹಿಡಿಯಲಾಗಿದ್ದ ಮೂರು ಕಂತುಗಳ ತುಟ್ಟಿಭತ್ಯೆಯನ್ನು ಮಂಜೂರು ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿತ್ತು.

ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಭಾರತ ಸರ್ಕಾರವು ಕೇಂದ್ರ ಸರ್ಕಾರದ ನೌಕರರಿಗೆ ಇದೇ ಜುಲೈ ತಿಂಗಳಿಂದ ಅನ್ವಯವಾಗುವಂತೆ ಶೇ 11 ತುಟ್ಟಿಭತ್ಯೆ ಮಂಜೂರು ಮಾಡಿದ್ದು ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡಾ ಸರ್ಕಾರಿ ನೌಕರರಿಗೆ ಶೇ 11 ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶಿಸಿದೆ.
ರಾಜ್ಯ ಸರ್ಕಾರ ಮಾಡಿರುವ ಮಹತ್ವದ ಆದೇಶದಿಂದಾಗಿ 6 ಲಕ್ಷ ರಾಜ್ಯ ಸರ್ಕಾರಿ ನೌಕರರು, 4.50 ಲಕ್ಷ ಪಿಂಚಣಿದಾರರು, 3 ಲಕ್ಷ ನಿಗಮ-ಮಂಡಳಿ ನೌಕರರಿಗೆ ಆರ್ಥಿಕ ಸೌಲಭ್ಯ ದೊರೆಯಲಿದೆ.

ಮುಖ್ಯಮಂತ್ರಿ, ಸಚಿವ ಸಂಪುಟದ ಎಲ್ಲಾ ಸಚಿವರಿಗೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ, ಮಹಾಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡಪ್ಪ ಪಾಟೀಲ್‍, ರಾಜ್ಯ ಖಜಾಂಚಿ ಶ್ರೀನಿವಾಸ್‍ ಹಾಗೂ ಕ್ರೇಂದ್ರ ಸಂಘದ ಎಲ್ಲ ಪದಾಧಿಕಾರಿಗಳಿಗೆ ಚಿತ್ರದುರ್ಗ ಜಿಲ್ಲೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಜಿ.ಆರ್, ರಾಜ್ಯಪರಿಷತ್ ಸದಸ್ಯ ಕೆ.ಟಿ.ತಿಮ್ಮರೆಡ್ಡಿ, ಜಿಲ್ಲಾ ಸಂಘದ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ತಾಲ್ಲೂಕು ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಇಲಾಖೆಗಳ ವೃಂಧ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರು ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

About The Author

Leave a Reply

Your email address will not be published. Required fields are marked *