May 15, 2024

Chitradurga hoysala

Kannada news portal

ಬಿಎಸ್ ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ

1 min read


ಬಿಎಸ್ ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ

ಚಿತ್ರದುರ್ಗ: ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಬುಧವಾರ ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಕ್ಕೆ ಎರಡು ವರ್ಷಗಳು ತುಂಬುತ್ತಿರುವ ಕಾರಣ ಔತಣಕೂಟ ಏರ್ಪಡಿಸುವ ಆಲೋಚನೆ ಕೈ ಬೀಡಲಾಗಿದೆ, ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವುದರಿಂದ ಈ ಸಮಯದಲ್ಲಿ ಸಭೆ ನಡೆಸುವುದು ,ಔತಣ ಬೇಡವೆಂದು ಹೈಕಮಾಂಡ್ ತಿಳಿಸಿದ ಹಿನ್ನೆಲೆ ರದ್ದು ಮಾಡಲಾಗಿದೆ. ಪಕ್ಷದ ಬಗ್ಗೆ ಬಹಿರಂಗ ಮಾತಾಡುವರಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ ಎಂದು ರವಿಕುಮಾರ್ ತಿಳಿಸಿದರು. ಬಿಎಸ್ ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ,ಈ ವಿಚಾರವಾಗಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ರಾಷ್ಟ್ರೀಯ ಅಧ್ಯಕ್ಷ ಜಿಪಿ ನಡ್ಡಾ ರವರು ಪ್ರತಿಕ್ರಿಯಿಸಲಿದ್ದಾರೆ ಎಂದು ರವಿಕುಮಾರ್ ಎಂದಷ್ಟೇ ತಿಳಿಸಿದರು.

About The Author

Leave a Reply

Your email address will not be published. Required fields are marked *