April 27, 2024

Chitradurga hoysala

Kannada news portal

ಡಿ.ಕೆ.ಶಿವಕುಮಾರ್ ಗೆ ಎದುರಾಯ್ತ ಮತ್ತೊಂದು ಸಂಕಷ್ಟ?

1 min read

ಬೆಂಗಳೂರು: ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ರದ್ದು ಮಾಡುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರ ಆಪ್ತ ಶಶಿಕುಮಾರ್ ಅವರು ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ತಳ್ಳಿಹಾಕಿದೆ. 

ದೆಹಲಿ ಡಿಕೆಶಿ ನಿವಾಸದಲ್ಲಿ ಸಿಕ್ಕಿದ್ದ ಅಕ್ರಮ ಹಣ ಪ್ರಕರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಒಪ್ಪಿದೆ ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ ಸಿಬಿಐ ಪರಿಶೀಲನೆ ಆರಂಭಿಸಿದೆ. 

ತನಿಖೆ ರದ್ದು ಮಾಡುವಂತೆ ಈ ಹಿಂದೆ ಡಿಕೆಶಿ ಆಪ್ತ ಶಶಿಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯದ ಅರ್ಜಿಯನ್ನು ವಜಾಗೊಳಿಸಿದೆ. 

ಅರ್ಜಿದಾರರ ವಕೀಲರು, ಪ್ರಕರಣವನ್ನು ಸಿಬಿಐ ತನಿಖೆಗ ಪೂರ್ವಾನುಮತಿ ನೀಡಿ ರಾಜ್ಯ ಸರ್ಕಾರ 2019ರ ಸೆ.25ರಂದು ಆದೇಶಿಸಿದೆ. ಆದರೆ, ಪೂರ್ವಾನುಮತಿ ನೀಡಲು ಸಕಾರಣಗಳೊಂದಿಗೆ ವಿವರವಾದ ಆದೇಶ ಹೊರಡಿಸಬೇಕಿತ್ತು. ಆದರೆ, ಆದೇಶದಲ್ಲಿ ಕಾರಣಗಳನ್ನು ತಿಳಿಸಿಲ್ಲ ಎಂದು ದೂರಿದ್ದರು. 

About The Author

Leave a Reply

Your email address will not be published. Required fields are marked *