*ಬಿ.ಎಲ್ .ಸಂತೋಷ್ ಜೀ ಮುಖ್ಯಮಂತ್ರಿ ಆಗುತ್ತಾರಾ…!?*
1 min read*ಬಿ.ಎಲ್ .ಸಂತೋಷ್ ಜೀ ಮುಖ್ಯಮಂತ್ರಿ ಆಗುತ್ತಾರಾ…!?*
ಬೆಂಗಳೂರು : ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ರಾಜ್ಯ ಬಿಜೆಪಿ ಪಕ್ಷದ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ.
ಮುಂದಿನ ಮುಖ್ಯಮಂತ್ರಿ ಯಾರನ್ನ ಮಾಡಬೇಕೆಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ಇದ್ದು, ಇದಕ್ಕಾಗಿ ಧರ್ಮೇಂದ್ರ ಪ್ರಧಾನ್, ಕರ್ನಾಟಕ ಸಿಎಂ ಆಯ್ಕೆಯ ವೀಕ್ಷಕರಾಗಿ ನೇಮಕ ಮಾಡಲಾಗಿದೆ.
ಆದ್ರೆ, ವೀಕ್ಷಕರ ತಂಡ ರಾಜ್ಯಕ್ಕೆ ಆಗಮಿಸುವ ಮೊದಲೇ ಬಿಎಲ್ ಸಂತೋಷ್ ಬೆಂಗಳೂರಿಗೆ ಆಗಮಿಸಿ ಇರುವುದು ತೀವ್ರ ಕುತೂಹಲ ತಂದಿದೆ. ಮಂಗಳವಾರ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ ಎನ್ನಲಾಗಿದೆ.
ಮುಂದಿನ ಸಿಎಂ ರೇಸ್ನಲ್ಲಿ ಪ್ರಲ್ಹಾದ್ ಜೋಶಿ, ಮುರುಗೇಶ್ ನಿರಾಣಿ, ಅರವಿಂದ್ ಬೆಲ್ಲದ್ ಸೇರಿದಂತೆ ಇನ್ನು ಕೆಲ ಹೆಸರುಗಳು ಕೇಳಿಬರುತ್ತಿವೆ. ಇವುಗಳ ನಡುವೆ ಸಂತೋಷ್ ಅವರ ಹೆಸರು ಸಹ ಚರ್ಚೆಯಲ್ಲಿದೆ. ಇದರ ನಡುವೆ ಇದೀಗ ಬಿ.ಎಲ್ ಸಂತೋಷ್ ಅವರು ಬೆಂಗಳೂರಿಗೆ ಆಗಮಿಸಿರುವುದು ಬಾಜಪ ವಲಯದಲ್ಲಿ ಸಂಚಲನ ಮೂಡಿಸಿದೆ.
ಬಿ.ಎಲ್. ಸಂತೋಷ್ ಜೀ ತಾವೇ ಮುಖ್ಯಮಂತ್ರಿ ಆಗುತ್ತಾರಾ…!? ಅಥವಾ ಮುಂದಿನ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡ್ತಾರಾ…!!!?? ಎನ್ನುವುದು ಕುತೂಹಲ ಕೆರಳಿಸಿದೆ