May 6, 2024

Chitradurga hoysala

Kannada news portal

ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದ ರಾಜ್ಯ ಕಾಂಗ್ರೆಸ್ ಮುಖಂಡ ಜಿ ಎಸ್ ಮಂಜುನಾಥ್…

1 min read

ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದ ರಾಜ್ಯ ಕಾಂಗ್ರೆಸ್ ಮುಖಂಡ ಜಿ ಎಸ್ ಮಂಜುನಾಥ್…

ಚಿತ್ರದುರ್ಗ:

ಚಿತ್ರದುರ್ಗ ತಾಲ್ಲೂಕು ಭರಮಸಾಗರ ಹೋಬಳಿ ಇಸಮುದ್ರ ಗ್ರಾಮದ ಅಪ್ರಾಪ್ತ ಬಾಲಕಿ ಶಶಿಕಲಾ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದನ್ನು ಖಂಡಿಸಿದರಲ್ಲದೆ ಕೂಡಲೇ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರದೇಶ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ರಾಜ್ಯಾಧ್ಯಕ್ಷ ಜಿ ಎಸ್ ಮಂಜುನಾಥ್ ಬೆಳಗ್ಗೆ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಕುಟುಂಬಕ್ಕೆ ಒಂದು ಸರ್ಕಾರಿ ಉದ್ಯೋಗ ನೀಡಬೇಕು. ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.
ಕುಟುಂಬದ 2 ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ಎಸ್ ಎಂ ಎಲ್ ಲಿಂಗರಾಜ್ ರವರು ವಹಿಸಿಕೊಳ್ಳುವುದಾಗಿ ಭರವಸೆ ನೀಡಿದರು.

ಚಿತ್ರದುರ್ಗ ಜಿಲ್ಲಾ ಅಸಂಘಟಿತ ಕಾರ್ಮಿಕ ಜಿಲ್ಲಾಧ್ಯಕ್ಷ ಮೋಹನ್ ಪೂಜಾರಿ, ರಾಜ್ಯ ಉಪಾಧ್ಯಕ್ಷ ಬಿ ಎಂ ಪಾಟೀಲ್, ದುರುಗೇಶ್ ಪೂಜಾರ್, ಗುರುರಾಜ್, ನಗರಸಭೆ ಮಾಜಿ ಸದಸ್ಯ ಚೇತನ್ ಕುಮಾರ್ ಮತ್ತಿತರರು ಇದ್ದರು.

About The Author

Leave a Reply

Your email address will not be published. Required fields are marked *