ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ರವರು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಸಚಿವ ಎ ನಾರಾಯಣಸ್ವಾಮಿ , ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ,ಬಗವಂತ ಖೂಬ,ರಾಜೀವ್ ಚಂದ್ರಶೇಖರ್,ಎ ನಾರಾಯಣಸ್ವಾಮಿ,ಶೋಭಾ ಕರಂದ್ಲಾಜೆ, ಸುಮಲತಾ ,ಸಿದ್ದೇಶ್ವರ,ತೇಜಸ್ವಿ ಸೂರ್ಯ , ದೆಹಲಿ ಯಲ್ಲಿ ಭೇಟಿ ಮಾಡಿದ್ದಾರೆ.
1 min readನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಸಂದರ್ಭದಲ್ಲಿ ಪ್ರಧಾನಿಗಳು ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನಿಡುವುದಾಗಿ ತಿಳಿಸಿ ಶುಭಕೋರಿದರು.
__________________________________________
ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಶುಕ್ರವಾರ ರಾಜ್ಯದ ಸಂಸದರಿಗಾಗಿ ಆಯೋಜಿಸಿದ್ದ ಔತಣ ಕೂಟದಲ್ಲಿ ಭಾಗವಹಿಸಿದ ಸಂಸದರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.ಈ ಔತಣ ಕೂಟದಲ್ಲಿ ಸುಮಲತಾ ,ಸಿದ್ದೇಶ್ವರ,ತೇಜಸ್ವಿ ಸೂರ್ಯ ಮತ್ತಿತರರು ಇದ್ದರು .
___________________________________________
ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಶುಕ್ರವಾರ ಸೌಹಾರ್ದಯುತವಾಗಿ ಭೇಟಿ ಮಾಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ
ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರು ಜೊತೆಗಿದ್ದರು.
___________________________________________
ದೆಹಲಿಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತು ರಾಜ್ಯದ ಆರು ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶುಕ್ರವಾರ ಶುಭಾಶಯ ಕೋರಿ,ಅಭಿವೃದ್ಧಿ ವಿಚಾರ ಚರ್ಚಿಸಿದ್ದಾರೆ. ಕರ್ನಾಟಕವನ್ನು ಪ್ರತಿನಿಧಿಸುವ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ,ಬಗವಂತ ಖೂಬ,ರಾಜೀವ್ ಚಂದ್ರಶೇಖರ್,ಎ ನಾರಾಯಣಸ್ವಾಮಿ,ಶೋಭಾ ಕರಂದ್ಲಾಜೆ ಜೊತೆಯಲ್ಲಿದ್ದಾರೆ.
___________________________________________
ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಯವರು ಕುಟುಂಬದ ಸಮೇತರಾಗಿ ಭಾರತದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿದ್ದಾರೆ .
___________________________________________
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಶುಕ್ರವಾರ ಭೇಟಿ ಮಾಡಿ ಅಭಿನಂದಿಸಿ ಹಲವು ವಿಷಯಗಳ ಕುರಿತು ಚರ್ಚಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.
ಇದೇ ಸಂದರ್ಭದಲ್ಲಿ ಸನ್ಮಾನಿಸಿ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.