ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದಿಂದ ಸುತ್ತೋಲೆ
1 min read
ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದಿಂದ ಸುತ್ತೋಲೆ
ಬೆಂಗಳೂರು: ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ.
ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸೂಚಿಸಿಲಾಗಿದೆ. ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂಬ ಆದೇಶ ಒಂದು ಹೊಸ ಬೆಳವಣಿಗೆಗೆ ಸಾಕ್ಷಿಯಿದ್ದಂತಿದೆ.