May 16, 2024

Chitradurga hoysala

Kannada news portal

ನಾಗರಿಕರು ನೆಮ್ಮದಿಯಿಂದ ಬದುಕುವ ವಾತಾವರಣ ಕಲ್ಪಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ. ಮುಖ್ಯಮಂತ್ರಿ

1 min read

ನಾಗರಿಕರು ನೆಮ್ಮದಿಯಿಂದ ಬದುಕುವ ವಾತಾವರಣ ಕಲ್ಪಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ :ಮುಖ್ಯಮಂತ್ರಿ ಬೊಮ್ಮಾಯಿ.

ಬೆಂಗಳೂರು: ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಹಾಡುಹಗಲೇ ಅತ್ತೆಯ ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಗರಿಕರು ನೆಮ್ಮದಿಯಿಂದ ಬದುಕುವ ವಾತಾವರಣ ಕಲ್ಪಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಮಂತ್ರಿ ಗಳು ದೂರು ಕೊಡಲು ಬಂದ ನಾಗರಿಕರೊಂದಿಗೆ ಸಂಯಮ ದಿಂದ ವರ್ತಿಸುವಂತೆ ಸೂಚಿಸಿದ್ದಾರೆ,
ಮುಖ್ಯಮಂತ್ರಿಯಾಗುವುದರ ಮೊದಲು ಗೃಹಖಾತೆಯ ನಿಭಾಯಿಸಿದ ರಿಂದ ಇಲಾಖೆಯಲ್ಲಿ ನಡೆಯುವ ಪ್ರತಿಯೊಂದು ವಿದ್ಯಮಾನಗಳು ನಮಗೆ ಗೊತ್ತಿದೆ ಎಂದು ತಿಳಿಸಿದರು. ನಾಗರಿಕರು ನೆಮ್ಮದಿಯಿಂದ ಬದುಕಲು ಪೊಲೀಸರ ಪಾತ್ರ ದೊಡ್ಡದಾಗಿದೆ ಕಾನೂನು-ಸುವ್ಯವಸ್ಥೆ ಕಾಪಾಡಿ ಯಾವುದೇ ಕಾರಣಕ್ಕೂ ಶಾಂತಿಗೆ ಭಂಗವಾಗದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದರು.

About The Author

Leave a Reply

Your email address will not be published. Required fields are marked *