ಆಗಸ್ಟ್17ರಂದು ರೈತ ಸಂಪರ್ಕ ಕೇಂದ್ರ ಉದ್ಘಾಟನೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ ಭಾಗಿ
1 min readಆಗಸ್ಟ್17ರಂದು ರೈತ ಸಂಪರ್ಕ ಕೇಂದ್ರ ಉದ್ಘಾಟನೆ
ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ ಭಾಗಿ
ಚಿತ್ರದುರ್ಗ,ಆಗಸ್ಟ್16:
ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿಯಲ್ಲಿ ಆಗಸ್ಟ್17ರಂದು ಬೆಳಿಗ್ಗೆ 11ಕ್ಕೆ ರೈತ ಸಂಪರ್ಕ ಕೇಂದ್ರದ ನೂತನ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ರಾಜ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸುವರು. ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ರಾಜ್ಯ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಉಪಸ್ಥಿತಿವಹಿಸುವರು. ಹಿರಿಯೂರು ಶಾಸಕರಾದ ಪೂರ್ಣಿಮಾ ಕೆ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಜಿ.ರಘು ಆಚಾರ್, ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಬಾನ ಪರ್ವಿನ್, ಉಪಾಧ್ಯಕ್ಷೆ ಕಾಳಿಬಾಯಿ, ಹಿರಿಯೂರು ತಾಲ್ಲೂಕು ಕೃಷಿಕ ಸಮಾಜ ಅಧ್ಯಕ್ಷ ಸಿ.ಹೆಚ್.ಕಾಂತರಾಜು, ಉಪಾಧ್ಯಕ್ಷ ಪಿ.ವಿ.ರಾಜಣ್ಣ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಂಟಿ ಕೃಷಿ ನಿರ್ದೇಶಕ ಡಾ.ರಮೇಶ್ ಕುಮಾರ್, ಉಪ ಕೃಷಿ ನಿರ್ದೇಶಕ ಡಾ.ಬಿ.ಎನ್.ಪ್ರಭಾಕರ್, ಹಿರಿಯೂರು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಶಿವಣ್ಣ ಭಾಗವಹಿಸುವರು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರಾದ ಡಾ.ಪಿ.ರಮೇಶ್ ಕುಮಾರ್ ತಿಳಿಸಿದ್ದಾರೆ