ಸದಾಶಿವ ಆಯೋಗದ ವರದಿ ಜಾರಿಗೆ ವಿರೋಧಿಸುತ್ತಿರುವ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಚರ್ಚೆ ಮಾಡುವುದಾದರೆ ಬಹಿರಂಗವಾಗಿ ಆಹ್ವಾನಿಸುತ್ತೇವೆ:
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಮಾದಿಗ ಸಮಾಜದ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯ:
ಚಿತ್ರದುರ್ಗ
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಜಿಲ್ಲಾ ಮಾದಿಗ ಸಮಾಜದ ಮುಖಂಡ ಹುಲ್ಲೂರು ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ೨೦೦೫ ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎನ್.ಧರ್ಮಸಿಂಗ್ರವರು ಸದಾಶಿವ ಆಯೋಗ ರಚಿಸಿದರು.
ಆರು ವರ್ಷ ಎಂಟು ತಿಂಗಳ ಕಾಲ ಸುಧೀರ್ಘವಾಗಿ ಅಧ್ಯಯನ ನಡೆಸಿ ೨೦೧೨ ರಲ್ಲಿ ಡಿ.ವಿ.ಸದಾನಂದಗೌಡರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ವರದಿ ಸಲ್ಲಿಸಿದ್ದು, ಇದುವರೆವಿಗೂ ಇನ್ನು ವರದಿ ಜಾರಿಯಾಗಿಲ್ಲದಿರುವುದು ನೋವಿನ ಸಂಗತಿ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಿ ಎ.ನಾರಾಯಣಸ್ವಾಮಿ ಇತ್ತೀಚೆಗೆ ಚಿತ್ರದುರ್ಗದಲ್ಲಿ ಜನಾಶೀರ್ವಾದ ಯಾತ್ರೆ ನಡೆಸಿದ ಸಂದರ್ಭದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಗೆ ಜಾರಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಈ ಸಂಬಂಧ ಪರಿಶಿಷ್ಟ ಜಾತಿಗೆ ಸೇರಿದ ಕೆಲವು ಸ್ವಾಮೀಜಿಗಳ ಜೊತೆ ಚರ್ಚಿಸುವುದಾಗಿ ಹೇಳಿರುವುದಕ್ಕೆ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ನೋಡಿದರೆ ಪರಿಶಿಷ್ಟ ಜಾತಿಗಳಲ್ಲಿ ಕಂದಕ ಸೃಷ್ಟಿಸುವಂತಿದೆ ಎಂದು ತಿರುಗೇಟು ನೀಡಿದರು.
ಸದಾಶಿವ ಆಯೋಗದ ವರದಿ ಜಾರಿಗೆ ವಿರೋಧಿಸುತ್ತಿರುವ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಚರ್ಚೆ ಮಾಡುವುದಾದರೆ ಬಹಿರಂಗವಾಗಿ ಆಹ್ವಾನಿಸುತ್ತೇವೆ. ಒಬ್ಬ ನ್ಯಾಯಮೂರ್ತಿ ಅಧ್ಯಯನ ನಡೆಸಿ ನೀಡಿರುವ ವರದಿಯನ್ನು ಅವೈಜ್ಞಾನಿಕ ಎಂದು ಹೇಳುವುದಾದರೆ ಸ್ವಾಮೀಜಿ ಮನಸ್ಥಿತಿ ಎಂತಹುದು ಎನ್ನುವುದು ಗೊತ್ತಾಗುತ್ತದೆ. ಎಂದು ಮಾದಿಗ ಮುಖಂಡ ಬಿ.ರಾಜಪ್ಪ ಆಪಾದಿಸಿದರು.
ವೈ.ರಾಜಣ್ಣ, ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ, ಎಸ್.ಜಗದೀಶ್, ನ್ಯಾಯವಾದಿ ಚಂದ್ರಪ್ಪ, ಡಿ.ಎಸ್.ಎಸ್.ಸಂಚಾಲಕ ಪಾಂಡುರAಗಸ್ವಾಮಿ, ಕುಂಚಿಗನಹಾಳ್ ಮಹಾಲಿಂಗಪ್ಪ ಪತ್ರಿಕಾಗೋಷ್ಟಿಯಲ್ಲಿದ್ದರು.