April 25, 2024

Chitradurga hoysala

Kannada news portal

ಸೆ.04ರಂದು ಫಿಟ್ ಇಂಡಿಯಾ ಪ್ರೀಡಂ ರನ್

1 min read

ಸೆ.04ರಂದು ಫಿಟ್ ಇಂಡಿಯಾ ಪ್ರೀಡಂ ರನ್
ಚಿತ್ರದುರ್ಗ,ಆಗಸ್ಟ್31:
ನೆಹರು ಯುವಕೇಂದ್ರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ದಿವಂಗತ ಶ್ರೀ ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 04ರಂದು ಬೆಳಿಗ್ಗೆ 7 ಕ್ಕೆ ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರನಾಯಕ ದಿವಂಗತ ಎಸ್.ನಿಜಲಿಂಗಪ್ಪನವರ ಮನೆಯಿಂದ ಸ್ಮಾರಕದವರೆಗೆ ಫಿಟ್ ಇಂಡಿಯಾ ಪ್ರೀಡಂ ರನ್ 2.0 ಆಯೋಜಿಸಲಾಗಿದೆ.
ರಾಷ್ಟ್ರನಾಯಕ ದಿವಂಗತ ಎಸ್.ನಿಜಲಿಂಗಪ್ಪನವರ ಮನೆಯ ಮುಂಭಾಗ ಫಿಟ್ ಇಂಡಿಯಾ ಪ್ರತಿಜ್ಞಾವಿಧಿ ಸ್ವೀಕಾರ ನಂತರ ಓಟಕ್ಕೆ ಚಾಲನೆ ನೀಡಲಾಗುವುದು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ರಕ್ಷಣಾಧಿಕಾರಿ ಜಿ.ರಾಧಿಕಾ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬೆಂಗಳೂರು ಗಾಂಧಿ ಸ್ಮಾರಕ ಭವನ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ರಾಜ್ಯಸಭಾ ಮಾಜಿ ಸದಸ್ಯರು ಹಾಗೂ ದಿವಂಗತ ಶ್ರೀಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ಗೌರವ ಕಾರ್ಯದರ್ಶಿ ಹೆಚ್.ಹನುಮಂತಪ್ಪ, ಟ್ರಸ್ಟ್‍ನ ಷಣ್ಮುಖಪ್ಪ ಉಪಸ್ಥಿತರಿದ್ದು, ಸ್ಮಾರಕದ ಬಳಿ ಓಟದಲ್ಲಿ ಭಾಗವಹಿಸಿದವರ ಸ್ವೀಕಾರ ಮಾಡುವರು.
ಬೆಂಗಳೂರು ಗಾಂಧಿ ಸ್ಮಾರಕ ಭವನ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ ಮತ್ತು ರಾಜ್ಯಸಭಾ ಮಾಜಿ ಸದಸ್ಯರು ಹಾಗೂ ದಿವಂಗತ ಶ್ರೀಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ಗೌರವ ಕಾರ್ಯದರ್ಶಿ ಹೆಚ್.ಹನುಮಂತಪ್ಪ ಅವರು “ಎಸ್.ನಿಜಲಿಂಗಪ್ಪನವರ ಹೋರಾಟ ಕುರಿತು” ಉಪನ್ಯಾಸ ನೀಡುವರು.
ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರನಾಯಕ ದಿವಂಗತ ಎಸ್.ನಿಜಲಿಂಗಪ್ಪನವರ ಮನೆಯಿಂದ ಸ್ಮಾರಕದವರೆಗೆ ಹಮ್ಮಿಕೊಂಡಿರುವ ಫಿಟ್ ಇಂಡಿಯಾ ಪ್ರೀಡಂ ರನ್ 2.0 ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದು ಎಂದು ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ಹಾಗೂ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಸುಹಾಸ್ ತಿಳಿಸಿದ್ದಾರೆ

About The Author

Leave a Reply

Your email address will not be published. Required fields are marked *