ಜಿಲ್ಲಾ ಆಯುಷ್ ಅಧಿಕಾರಿ ಡಾ.ಕೆ.ಎಲ್.ವಿಶ್ವನಾಥ್ಗೆ ಸನ್ಮಾನ
1 min readಜಿಲ್ಲಾ ಆಯುಷ್ ಅಧಿಕಾರಿ ಡಾ.ಕೆ.ಎಲ್.ವಿಶ್ವನಾಥ್ಗೆ ಸನ್ಮಾನ
ಚಿತ್ರದುರ್ಗ :ಸೆಪ್ಟೆಂಬರ್04:
ಚಿತ್ರದುರ್ಗ ಜಿಲ್ಲಾ ರೋಟರಿ ಕ್ಲಬ್ ವತಿಯಿಂದ ರೋಟರಿ ಬಾಲ ಭವನದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಕೆ.ಎಲ್.ವಿಶ್ವನಾಥ್ ಅವರಿಗೆ ಶುಕ್ರವಾರ ಸನ್ಮಾನ ಮಾಡಲಾಯಿತು.
ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧವಾಗಿ ಆಯುಷ್ ಇಲಾಖೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಾರ್ವಜನಿಕರಲ್ಲಿ ಔಷಧಿಗಳನ್ನು ನೀಡಿ ಮತ್ತು ಆಹಾರ ಪದ್ಧತಿಯಲ್ಲಿ ಜೀವನ ಕ್ರಮವನ್ನು ರೂಢಿಸಿಕೊಂಡು ಮತ್ತು ಯೋಗಾಭ್ಯಾಸದಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಕರೋನಾ ವಿರುದ್ಧವಾಗಿ ಹೋರಾಟ ನಡೆಸಲು ಮುಂದಾಳತ್ವ ವಹಿಸಿದ್ದರು. ಜಿಲ್ಲೆಯ ಎಲ್ಲಾ ಆಯುಷ್ ವೈದ್ಯಾಧಿಕಾರಿಗಳನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮತ್ತು ಚಿಕಿತ್ಸೆಗೆ ಒಳಪಡಿಸುವ ಕ್ರಮವನ್ನು ನಿಭಾಯಿಸಿದ ವಿಚಾರವಾಗಿ ಮಾಡಿದ ಸೇವೆಗಾಗಿ ರೋಟರಿ ಕ್ಲಬ್ ವತಿಯಿಂದ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಚಿನ್ಮೂಲಾದ್ರಿ ರೋಟರಿ ಕ್ಲಬ್ ಅಧ್ಯಕ್ಷರಾದ ಚೆಲುವರಾಜು, ಕಾರ್ಯದರ್ಶಿ ಅರುಣ್ ಕುಮಾರ್ ಸೇರಿದಂತೆ ರೋಟರಿಯನ್ಸ್ ಉಪಸ್ಥಿತರಿದ್ದರು.