April 23, 2024

Chitradurga hoysala

Kannada news portal

ನಾಳೆ ದಿನಾಂಕ: 06.09.2021 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ವಿಭಾಗದ ಅಧ್ಯಕ್ಷಿ ಗೀತಾ ನಂದಿನಿ ಗೌಡ ನಾಯಕತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ.

1 min read

ಕೇಂದ್ರ ಸರ್ಕಾರದ ಮಾಡಿರುವ ದರ ಏರಿಕೆ ವಿರುದ್ದ ಗೀತಾನಂದಿನಿ ಗೌಡ ಇವರಿಂದ ಪ್ರತಿಭಟನೆ.

ಕೇಂದ್ರ ಸರ್ಕಾರ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರಗಳನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ನಾಳೆ ದಿನಾಂಕ: 06.09.2021 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ವಿಭಾಗದ ಅಧ್ಯಕ್ಷರಾದ ಗೀತಾ ನಂದಿನಿ ಗೌಡ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ, ಈ ಪ್ರತಿಭಟನೆ ನಂತರ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಹೊರತು ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಗೌರವ ಭಾರತ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು.

ಈ ಕಾರ್ಯಕ್ರಮಕ್ಕೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಹಾಗೂ ಎಲ್ಲಾ ಸೆಲ್ ಗಳ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲೆಯ ಹಾಲಿ ಮತ್ತು ಮಾಜಿ ಚುನಾಯಿತ ಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರುಗಳು, ಆದರಣೀಯ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳಾದ ತಾವುಗಳೆಲ್ಲರೂ ತಪ್ಪದೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕಳಕಳಿಯಿಂದ, ವಿನಮ್ರತೆಯಿಂದ ತಮ್ಮೆಲ್ಲರನ್ನು ಆಹ್ವಾನಿಸುತ್ತೆನೆ ಗೀತಾ ನಂದಿನಿ ಗೌಡ …

About The Author

Leave a Reply

Your email address will not be published. Required fields are marked *