April 23, 2024

Chitradurga hoysala

Kannada news portal

ಬಾಣಂತಿ ಸಾವು : ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ

1 min read

ಬಾಣಂತಿ ಸಾವು : ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ

ಚಿತ್ರದುರ್ಗ : ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ಆಕೆಯ ಸಂಬಂಧಿಕರು ಜಿಲ್ಲಾಸ್ಪತ್ರೆ ಆವರಣದಲ್ಲಿ ಶವವಿಟ್ಟು ಬುಧವಾರ ಪ್ರತಿಭಟನೆ ನಡೆಸಿದರು.
ಆಸ್ಪತ್ರೆ ಮುಂದೆ ಜಮಾಯಿಸಿದ ಸಂಬಂಧಿಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹೊಳಲ್ಕೆರೆ ತಾಲೂಕಿನ ಲೋಕದೊಳಲು ಗ್ರಾಮದ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿ ಬಳಿಕ ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದು ಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದಾರೆ. ಆದರೆ ಯಾವುದೇ ಆಸ್ಪತ್ರೆಗಳಿಗೆ ತೆರಳಿದರೂ ಚಿಕಿತ್ಸೆ ಫಲಿಸದೆ ಲತಾ ಮೃತಪಟ್ಟಿದ್ದಾಳೆ.

ಘಟನೆಗೆ ವೈದ್ಯರು ಹಾಗೂ ಸಿಬ್ಬಂದಿಯೇ ಕಾರಣ ಎಂದು ಇದರಿಂದ ಆಕ್ರೋಶಗೊಂಡ ಬಾಣಂತಿಯ ಸಂಬಂಧಿಕರು ಜಿಲ್ಲಾ ಆಸ್ಪತ್ರೆಗೆ ಶವ ತಂದು ಪ್ರತಿಭಟಿಸಿದರು.

About The Author

Leave a Reply

Your email address will not be published. Required fields are marked *