ನಾಗರಾಜ್ ಅಧ್ಯಕ್ಷ ರಾಗಿ ಆಯ್ಕೆ
1 min readನಾಗರಾಜ್ ಅಧ್ಯಕ್ಷ ರಾಗಿ ಆಯ್ಕೆ
ಚಿತ್ರದುರ್ಗ:
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾಗಿ ನಾಗರಾಜ್. ಕೆ ಆಯ್ಕೆ ಯಾಗಿದ್ದಾರೆ.
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸಂಘದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಜಿಲ್ಲಾ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ಇಂದು ಚಿತ್ರದುರ್ಗ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನೌಕರರು ಸರ್ವಾನುಮತದಿಂದ ನಾಗರಾಜ್.ಕೆ ಸಣ್ಣ ನೀರಾವರಿ ಇಲಾಖೆ ಇವರನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ಮಂಜುನಾಥ.ಕೆ
ಹಾಗೂ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ನೌಕರರು ಅಭಿನಂದಿಸಿದ್ದಾರೆ.