ಮೀಸಲಾತಿ ಸಂರಕ್ಷಣಾ ಒಕ್ಕೂಟದ ಪ್ರಮುಖರ ಜೊತೆಗೆ ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ.
1 min readಮೀಸಲಾತಿ ಸಂರಕ್ಷಣಾ ಒಕ್ಕೂಟದ ಪ್ರಮುಖರ ಜೊತೆಗೆ ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ.
ಬೆಂಗಳೂರು:
ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರನ್ನು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ನೇತೃತ್ವದಲ್ಲಿ ಭೋವಿ ಬಂಜಾರ ಅಲೆಮಾರಿ ಸಮುದಾಯಗಳ ಹಾಲಿ ಮಾಜಿ ಸಚಿವರ, ಶಾಸಕರ, ಸಂಸದರ, ನಿಗಮ ಮಂಡಳಿಗಳ ಅಧ್ಯಕ್ಷರ, ಹಿತಚಿಂತಕರ ನಿಯೋಗ ಭೇಟಿ ಮಾಡಿತು.
ಮಾಜಿ ಸಚಿವ ಹಾಲಿ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, KSRTC ಅಧ್ಯಕ್ಷ ಹಾಗೂ ಹೊಳಲ್ಕೆರೆ ಶಾಸಕ ಚಂದ್ರಪ್ಪ, ಮಾಜಿ ಸಚಿವ ಹಾಲಿ ಪಾವಗಡ ಶಾಸಕ ವೆಂಕಟರಮಣಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ, ಸಿ.ವಿ.ರಾಮನ್ ನಗರ ಶಾಸಕ ಎಸ್. ರಘು, ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಬಂಜಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಕುಡುಚಿ ಶಾಸಕ ಪಿ.ರಾಜೀವ್, ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ ಜಾಧವ, ಕಲ್ಬುರ್ಗಿ ಸಂಸದ ಉಮೇಶ್ ಜಾಧವ್, ಚಿಂಚೊಳ್ಳಿ ಶಾಸಕ ಅವಿನಾಶ್ ಜಾಧವ, ದೇವನಹಳ್ಳಿ ಮಾಜಿ ಶಾಸಕ ಚಂದ್ರಪ್ಪ, ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಹಾಗೂ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಪ್ರಮುಖರು ಮತ್ತು ಇನ್ನಿತರರು ಉಪಸ್ಥಿತಿಯಿದ್ದರು