ವಿದ್ಯುತ್ ಗೋಪುರಗಳನ್ನು ಸಾರ್ವಜನಿಕರು ಮುಟ್ಟದಿರಲು ಸೂಚನೆ
1 min readವಿದ್ಯುತ್ ಗೋಪುರಗಳನ್ನು ಸಾರ್ವಜನಿಕರು ಮುಟ್ಟದಿರಲು ಸೂಚನೆ
ಚಿತ್ರದುರ್ಗ,ಅಕ್ಟೋಬರ್08:
220/66 ಕೆವಿ ತಳಕು ವಿದ್ಯುತ್ ಸ್ವೀಕರಣ ಕೇಂದ್ರದಿಂದ ಉದ್ದೇಶಿತ 220/27 ಕೆವಿ ಆರ್.ವಿ.ಎನ್.ಎಲ್ ತಳಕು ರೈಲ್ವೆ ವಿದ್ಯುದೀಕರಣ ಕೇಂದ್ರಕ್ಕೆ ಉದ್ದೇಶಿತ ಡಿ.ಸಿ ಟವರ್ಗಳಲ್ಲಿ 220ಕೆವಿ ಎಸ್.ಸಿ ವಿದ್ಯುತ್ ಪ್ರಸರಣ ಮಾರ್ಗವನ್ನು ಅಕ್ಟೋಬರ್ 11 ರಂದು ಅಥವಾ ತದನಂತರ ಚೇತನಗೊಳ್ಳುತ್ತಿರುವುದರಿಂದ ಸಾರ್ವಜನಿಕರು ಎಚ್ಚರಕೆಯಿಂದ ಇರಬೇಕು.
220ಕೆವಿ ವಿದ್ಯುತ್ ಪ್ರಸರಣ ಮಾರ್ಗದ ವಿದ್ಯುತ್ ಗೋಪುರಗಳನ್ನು ಸಾರ್ವಜನಿಕರು ಮುಟ್ಟುವುದಾಗಲಿ, ಹತ್ತುವುದಾಗಲಿ, ಮರದ ರಂಬೆ, ಲೋಹದ ತಂತಿಗಳನ್ನು ಮತ್ತು ಇತರೆ ಯಾವುದೇ ವಸ್ತುಗಳನ್ನು ವಿದ್ಯುತ್ ಮಾರ್ಗದ ಮೇಲೆ ಎಸೆಯುವುದಾಗಲಿ ಮತ್ತು ವಿದ್ಯುತ್ ಗೋಪುರಗಳಿಗೆ ಜಾನುವಾರುಗಳನ್ನು ಕಟ್ಟುವುದಾಗಲಿ ಮಾಡಬಾರದೆಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಒಂದು ವೇಳೆ ಎಚ್ಚರಿಕೆಯನ್ನು ಉಲ್ಲಂಘಿಸಿದಲ್ಲಿ ಸಾರ್ವಜನಿಕರಿಗೆ ಆಗುವ ಹಾನಿ, ತೊಂದರೆ, ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಜವಬ್ದಾರಿಯಾಗುವುದಿಲ್ಲ. ವಿದ್ಯುತ್ ಮಾರ್ಗವು ತಳಕು, ಚಳ್ಳಕೆರೆ ತಾಲ್ಲೂಕಿನ ಪ್ರದೇಶಗಳಲ್ಲಿ ಹಾದು ಹೋಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಬೃಹತ್ ಕಾಮಗಾರಿ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.