April 20, 2024

Chitradurga hoysala

Kannada news portal

ಉಳಿದ ಅವಧಿಗೆ ಯಡಿಯೂರಪ್ಪ ಅವರೆ ಮುಖ್ಯಮಂತ್ರಿ: ಸಚಿವ ಬಿ.ಶ್ರೀರಾಮುಲು

1 min read

ಚಿತ್ರದುರ್ಗ: ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿ ಇಲ್ಲ , ಉಳಿದ ಅವಧಿಗೆ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ ಅದರಲ್ಲಿ ಅನುಮಾನ ಬೇಡ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು

ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ, ಚರ್ಚೆಗಳೆಲ್ಲಾ ಕೇವಲ ಬೇಕಿಲ್ಲದವರು ಈ ರೀತಿ ಮಾಡುತ್ತಿದ್ದಾರೆ. ಉಳಿದ ಅವಧಿಗೆ ಬಿಎಸ್ ವೈ ಮುಂದುವರೆಯುತ್ತಾರೆ. ಬಿಜೆಪಿಯಲ್ಲಿ ಯಾವುದೇ ರಹಸ್ಯ ಸಭೆ ನಡೆದಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು. ಯಡಿಯೂರಪ್ಪ ಅವರು ಉತ್ತಮ ಆಡಳಿತ ನಡೆಸುತ್ತಿದ್ದು ಅವರ ಜೊತೆ ಎಲ್ಲಾರೂ ಒಟ್ಟಾಗಿ ಇದ್ದೇವೆ ಎಂದು ಸ್ಪಷ್ಟಪಡಿಸಿದರು.

About The Author

Leave a Reply

Your email address will not be published. Required fields are marked *