May 3, 2024

Chitradurga hoysala

Kannada news portal

ಸಾಹಿತಿ ಪ್ರೊ.ಡಿ.ಟಿ.ರಂಗಸ್ವಾಮಿಗೆ ರಾಜ್ಯೋತ್ಸವ ಪ್ರಶಸ್ತಿ: ಮಾಜಿ ಸಚಿವ ಎಚ್.ಆಂಜನೇಯ ಅಭಿನಂದನೆ.

1 min read


ಸಾಹಿತಿ ಪ್ರೊ.ಡಿ.ಟಿ.ರಂಗಸ್ವಾಮಿಗೆ ರಾಜ್ಯೋತ್ಸವ ಪ್ರಶಸ್ತಿ: ಮಾಜಿ ಸಚಿವ ಎಚ್.ಆಂಜನೇಯ ಅಭಿನಂದನೆ.

ಚಿತ್ರದುರ್ಗ:ನ.01

ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ಹೊಳಲ್ಕೆರೆ ತಾಲೂಕಿನ ಹೊರಕೆರೆದೇವರಪುರದ ಹೆಮ್ಮೆಯ ಸುಪುತ್ರ ಸಾಹಿತಿ ಪ್ರೊ.ಡಿ.ಟಿ.ರಂಗಸ್ವಾಮಿರವರಿಗೆ ಮಾಜಿ ಸಚಿವ ಎಚ್.ಆಂಜನೇಯ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ಅಭಿನಂದನೆ ಸಲ್ಲಿಸಿರುವ ಮಾಜಿ ಸಚಿವ ಎಚ್.ಆಂಜನೇಯರವರು, ಸಾಹಿತಿ ಪ್ರೊ.ಡಿ.ಟಿ.ರಂಗಸ್ವಾಮಿರವರು ವಿಮರ್ಶೆ, ನಾಟಕ, ಜೀವನ ಚರಿತ್ರೆ, ಶಾಸ್ತ್ರಗ್ರಂಥ, ಮಕ್ಕಳ ಸಾಹಿತ್ಯ ಪತ್ರಲೇಖನ ಕಲೆ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಗ್ರಂಥಗಳನ್ನು ರಚಿಸಿದ್ದಾರೆ. ಅಧ್ಯಾಪಕರಾಗಿ ಕನ್ನಡ ಪಠ್ಯ ಪುಸ್ತಕ ರಚನೆಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಹಾಗೆಯೇ 1942ರಲ್ಲಿ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ್ದಾರೆ. ಇವರ ಸಾಧನೆಗೆ, ಶ್ರಮಕ್ಕೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿ. ಇನ್ನು ಹೆಚ್ಚಿನ ಸೇವೆಯನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನಿಮ್ಮಿಂದಾಗಲೆಂದು ಮಾಜಿ ಸಚಿವ ಎಚ್.ಆಂಜನೇಯ ಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *