April 23, 2024

Chitradurga hoysala

Kannada news portal

ನಾಳೆ ವಿಶ್ವ ಮಧುಮೇಹ ದಿನದ ಅಂಗವಾಗಿ ವಿಶೇಷ ಉಪನ್ಯಾಸ

1 min read


ವಿಶ್ವ ಮಧುಮೇಹ ದಿನದ ಅಂಗವಾಗಿ ವಿಶೇಷ ಉಪನ್ಯಾಸ

ಚಿತ್ರದುರ್ಗ:

ಚಿತ್ರದುರ್ಗ   ನಗರದ ಬಸವೇಶ್ವರ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರಾದ ಡಾ.ಜಿ ಪ್ರಶಾಂತ್ ಅವರಿಂದ ಸಕ್ಕರೆ ಕಾಯಿಲೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಚಿತ್ರದುರ್ಗದ ಜಿಲ್ಲಾ ಯೋಗ ತರಬೇತಿಯ ಸಂಸ್ಥೆಯ ವತಿಯಿಂದ ದಿನಾಂಕ:14-11-2021ರ ಭಾನುವಾರ ಬೆಳಗ್ಗೆ 6 ಗಂಟೆಯಿಂದ ನಗರದ ರೋಟರಿ ಕ್ಲಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಯೋಗ ತರಬೇತಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಎಲ್.ಎಸ್ ಚಿನ್ಮಯಾನಂದ ಅವರು ತಿಳಿಸಿದ್ದಾರೆ. ಆಸಕ್ತರು ಸರಿಯಾದ ಸಮಯಕ್ಕೆ ಹಾಜರಾಗಿ ಒಂದು ಗಂಟೆ ನಡೆಯುವ ಈ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ತಿಳಿದುಕೊಳ್ಳಬಹುದಾಗಿದೆ ಎಂದು ಕೋರಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಯೋಗ ತರಬೇತಿ ಸಂಸ್ಥೆಯ ವಿದ್ಯಾರ್ಥಿ,ಎಸ್.ಜೆ.ಎಂ ದಂತ ವೈದ್ಯಕೀಯ ಮಹಾವಿದ್ಯಾಲಯದ ಮಕ್ಕಳ ದಂತ ವಿಭಾಗದ ಮುಖ್ಯಸ್ಥರು ಆಗಿರುವ ಡಾ.ಎಂ.ಎ.ರಘುನಾಥರೆಡ್ಡಿ ಅವರಿ ಗೆ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದು.
ಹೆಚ್ಚಿನ ಮಾಹಿತಿಗಾಗಿ ಈ ಫೋನ್ ನಂಬರ್ ಗೆ ಸಂಪರ್ಕಿಸಬಹುದು
9986295285

About The Author

Leave a Reply

Your email address will not be published. Required fields are marked *