May 2, 2024

Chitradurga hoysala

Kannada news portal

ಚರ್ಮ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ ನಿರ್ಮಾಣ ಯೋಜನೆಗೆ ಅರ್ಜಿ ಆಹ್ವಾನ

1 min read


ಚರ್ಮ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ ನಿರ್ಮಾಣ ಯೋಜನೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ,ನವೆಂಬರ್20:
ಡಾ.ಬಾಬು ಜಗಜೀವನರಾಂ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ವ್ಯಾಪ್ತಿಗೆ ಬರುವ ಸುತ್ತಮುತ್ತಲಿನ ಗ್ರಾಮಗಳ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕುಶಲಕರ್ಮಿಗಳಿಗೆ ಹೊಳಲ್ಕೆರೆ ತಾಲ್ಲೂಕಿನ ವ್ಯಾಪ್ತಿಗೆ ಬರುವ ಸುತ್ತಮುತ್ತಲಿನ ಗ್ರಾಮಗಳ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕುಶಲಕರ್ಮಿಗಳಿಗೆ ಹೊಳಲ್ಕೆರೆ ಕಣಿವೆಯ ಪುರಸಭೆ ವ್ಯಾಪ್ತಿಗೆ ಬರುವ ಸರ್ವೇ ನಂ.217ರಲ್ಲಿ ಜಿ+ಮಾದರಿಯ ವಸತಿ ಕಾರ್ಯಾಗಾರ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಫಲಾಪೇಕ್ಷಿಗಳು ಅರ್ಜಿಗಳನ್ನು ಜಿಲ್ಲಾ ಸಂಯೋಜಕರ ಕಚೇರಿಯಿಂದ ನವೆಂಬರ್ 20 ರಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಅವಶ್ಯ ದಾಖಲೆಗಳೊಂದಿಗೆ ಡಿಸೆಂಬರ್ 04ರೊಳಗಡೆ ಜಿಲ್ಲಾ ಸಂಯೋಜಕರ ಕಚೇರಿ ಚಿತ್ರದುರ್ಗ ಇಲ್ಲಿಗೆ ಸಲ್ಲಿಸಬಹುದಾಗಿದೆ.
ಸಾಮಾನ್ಯ ಅರ್ಹತೆಗಳು: ಕಡ್ಡಾಯವಾಗಿ ಚರ್ಮಗಾರಿಕೆ ವೃತಿಯನ್ನು ಮಾಡುತ್ತಿರಬೇಕು. ವಸತಿ ರಹಿತರಾಗಿರಬೇಕು (ಗ್ರಾಮ ಪಂಚಾಯಿತಿಯಿಂದ ಪ್ರಮಾಣಪತ್ರ ಲಗತ್ತಿಸಿರಬೇಕು) ಪರಿಶಿಷ್ಟ ಜಾತಿಗೆ ಸೇರಿರಬೇಕು (ಸಮಗಾರ, ಮೋಚಿ, ಡೋರ, ಮಾದಿಗ, ಚಮ್ಮಾರ ಉಪ ಜಾತಿಗೆ ಸೇರಿರಬೇಕು) ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರಿಯಲ್ಲಿ ಇರಬಾರದು. ಈ ಹಿಂದೆ ನಿಗಮದ ಅಥವಾ ಸರ್ಕಾರದ ಯಾವುದೇ ವಸತಿ ಯೋಜನೆಯಡಿ ಸೌಲಭ್ಯ ಪಡೆದಿರಬಾರದು. ಒಂದೇ ಕುಟುಂಬದಲ್ಲಿ ಒಬ್ಬರು ಮಾತ್ರ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿದಾರರ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.32000/-ಗಳ ಮಿತಿಯಲ್ಲಿರಬೇಕು. ಕರ್ನಾಟಕ ರಾಜ್ಯ ಹಾಗೂ ಹೊಳಲ್ಕೆರೆ ತಾಲ್ಲೂಕಿನ ನಿವಾಸಿಯಾಗಿರಬೇಕು. ಮಂಜೂರಾತಿ ಪಡೆದ ಫಲಾನುಭವಿಗಳು ಅನರ್ಹರು ಎಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದು ಪಡಿಸುವ ಅಧಿಕಾರವನ್ನು ನಿಗಮವು ಹೊಂದಿರುತ್ತದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಂಯೋಜಕರ ದೂರವಾಣಿ ಸಂಖ್ಯೆ 9480886279, 9480886272, 9148524231 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸಂಯೋಜಕ ಗಂಗಾಧರ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *