May 3, 2024

Chitradurga hoysala

Kannada news portal

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‍ಕುಮಾರ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಹಾಂತೇಶ್ ಇವರ ಪತ್ನಿ ಶ್ರೀಮತಿ ಕೆ.ಗೌರಮ್ಮ ನಿಧನ

1 min read


ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‍ಕುಮಾರ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಹಾಂತೇಶ್ ಇವರ ಪತ್ನಿ ಶ್ರೀಮತಿ ಕೆ.ಗೌರಮ್ಮ ನಿಧನ

ಚಿತ್ರದುರ್ಗ:

ಚಿತ್ರದುರ್ಗ ನಗರದ ಐ.ಯು.ಡಿ.ಪಿ. ಲೇಔಟ್‍ನ 6ನೇ ಕ್ರಾಸ್ ನಿವಾಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‍ಕುಮಾರ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಹಾಂತೇಶ್ ಇವರ ಪತ್ನಿ ಶ್ರೀಮತಿ ಕೆ.ಗೌರಮ್ಮ ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

ಬೆಳಿಗ್ಗೆ ಮನೆಯಲ್ಲಿ ಹೃದಯಾಘಾತಕ್ಕೊಳಗಾದಾಗ ತಕ್ಷಣ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದರೆ.ಮೃತರು ಪತಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‍ಕುಮಾರ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಹಾಂತೇಶ್ ಎಸ್.ಕೆ. ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಗುರುವಾರ ಬೆಳಿಗ್ಗೆ ಸುಮಾರು 12 ಗಂಟೆಗೆ ಯಂಗಮ್ಮನಕಟ್ಟೆಯ.ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಮೃತ ಕುಟುಂಬದವರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *