ಇಂದು ಸಂಜೆ ಚಿತ್ರದುರ್ಗು ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
1 min readಇಂದು ಸಂಜೆ ಚಿತ್ರದುರ್ಗು ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಚಿತ್ರದುರ್ಗ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೆಂಬರ್-26ರಂದು ಇಂದು ಸಂಜೆ ಚಿತ್ರದುರ್ಗ ಜಿಲ್ಲಾ ಪ್ರವಾಸ ಮಾಡಲ್ಲಿದ್ದಾರೆ.
ಮುಖ್ಯಮಂತ್ರಿಗಳು ಶುಕ್ರವಾರ ಸಾಯಂಕಾಲ ಶಾಸಕ ತಿಪ್ಪಾರೆಡ್ಡಿ ಯವರ ನಿವಾಸದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಚಿತ್ರದುರ್ಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆ ಕುರಿತು ಜಿಲ್ಲಾ ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳೊಂದಿಗೆ ಗಂಭೀರ ಚರ್ಚೆ ನಡೆಸಲಿದ್ದಾರೆ.
ಜಿಲ್ಲೆಯ ಬಿಜೆಪಿ ಶಾಸಕರುಗಳು, ಕೇಂದ್ರ ಸಚಿವರು, ಪಕ್ಷದ ಮುಖಂಡರುಗಳು ಉಪಸ್ಥಿತರಿರುವರು ಎಂದು ತಿಳಿದು ಬಂದಿದೆ.