April 25, 2024

Chitradurga hoysala

Kannada news portal


ಇಂದು ಹೊಳಲ್ಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ.

ಹೊಳಲ್ಕೆರೆ ಪಟ್ಟಣದ ಚನ್ನಗಿರಿ ರಸ್ತೆಯಲ್ಲಿರುವ ಶಾದಿಮಹಲ್ ನಲ್ಲಿ ನವೆಂಬರ್ 30 ರಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಸಮಾವೇಶವನ್ನು ಆಯೋಜಿಸಲಾಗಿದೆ.

ಕಾಂಗ್ರೆಸ್ ಪಕ್ಷ ನಿರಂತರವಾಗಿ ಗೆಲುವು ಸಾಧಿಸಿಕೊಂಡು ಬರುತ್ತಿರುವ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಗೆ ಈ ಬಾರಿ ವಿಶೇಷವಾಗಿ ಗ್ರಾಮ ಪಂಚಾಯಿತಿ ಸದಸ್ಯರೂ,  ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕಾಂಗ್ರೆಸ್ಸಿನ ನಿಷ್ಠಾವಂತ ಕಾರ್ಯಕರ್ತ ಬಿ. ಸೋಮಶೇಖರ್ ರವರು ಅಭ್ಯರ್ಥಿಯಾಗಿ ಸ್ಪರ್ದಿಸಿದ್ದಾರೆ.
ಇವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕಾದ ಹಿನ್ನಲೆಯಲ್ಲಿಸಮಾವೇಶ ಹಮ್ಮಿಕೊಳ್ಳಲಾಗಿದ್ದು ಸಮಾವೇಶಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಬಿಟಿಎಂ ಲೇಔಟ್ ಶಾಸಕರಾದ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಪಕ್ಷದ ಜಿಲ್ಲಾ, ತಾಲೂಕುಗಳ ಹಾಗೂ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ತಾಲೂಕಿನ ಗ್ರಾಮ ಪಂಚಾಯತಿ ಸದಸ್ಯರು, ಪಟ್ಟಣ ಪಂಚಾಯತಿ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಮಾಜಿ ಸಚಿವ ಎಚ್.ಆಂಜನೇಯ ಕೋರಿದ್ದಾರೆ.

About The Author

Leave a Reply

Your email address will not be published. Required fields are marked *