ತುರುವನೂರು ಕಾಲೇಜು ಸಿದ್ದರಾಮಯ್ಯ ಅವರು ಸಾವಿರಾರು ವಿದ್ಯಾರ್ಥಿಗಳ ಅನುಕೂಲಕ್ಕೆ ಮಾಡಿದ್ದಾರೆ.
1 min readಚಳ್ಳಕೆರೆ ವಿಧಾನಸಭಾ ಕ್ಷೇತ್ರದ ತುರುವನೂರು ಕಾಲೇಜನ್ನು ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಜೂರು ಮಾಡುವ ಮೂಲಕ ಸಾವಿರಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆರವಾಗಿದೆ.
ಈ ಪ್ರಥಮ ದರ್ಜೆ ಕಾಲೇಜನ್ನು ನಿಪ್ಪಾಣಿಗೆ ಸ್ಥಳಾಂತರಿಸುವುದು ಬೇಡ ಎಂದು ಶಾಸಕರ ಬೆಂಬಲಿಗರು, ಚಳ್ಳಕೆರೆ ನಗರಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಎಬಿವಿಪಿ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ವಿವಿಧ ಸಂಘಟನೆಗಳು, ಪಕ್ಷದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಒತ್ತಾಯಿಸಿ ಯಾವುದೇ ಕಾರಣಕ್ಕೂ ತುರುವನೂರು ಪ್ರಥಮ ದರ್ಜೆ ಕಾಲೇಜು ಸ್ಥಳಾಂತರಕ್ಕೆ ಬಿಡುವುದಿಲ್ಲ. ಸರ್ಕಾರ ವರ್ಗಾವಣೆ ನಿರ್ಧಾರ ಕೈಬಿಡದೇ ಇದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು.ಚಳ್ಳಕೆರೆ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು