ಚಿತ್ರದುರ್ಗದ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ.ಪರಶುರಾಮ್: ಎಸ್ಪಿ ರಾಧಿಕಾ.ಜಿ ಬೆಂಗಳೂರಿಗೆ ವರ್ಗಾವಣೆ:
1 min read
ಚಿತ್ರದುರ್ಗದ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ.ಪರಶುರಾಮ್: ಎಸ್ಪಿ ರಾಧಿಕಾ.ಜಿ ಬೆಂಗಳೂರಿಗೆ ವರ್ಗಾವಣೆ:
ಚಿತ್ರದುರ್ಗ
ಬೆಂಗಳೂರಿನ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್ಪಿಯಾಗಿದ್ದ ಕೆ.ಪರಶುರಾಮ್ ಅವರನ್ನು ಚಿತ್ರದುರ್ಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಐಪಿಎಸ್ ಅಧಿಕಾರಿಯಾಗಿರುವ ಕೆ.ಪರಶುರಾಮ್ ಇವರು ಹಿಂದೆ ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಎಎಸ್ಪಿ) ಆಗಿ ಸೇವೆ ಸಲ್ಲಿಸಿದ್ದರು. ನಂತರ ಮಂಡ್ಯ, ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದನ್ನು ಸ್ಮರಿಸಬಹುದಾಗಿದೆ.
ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಅರವರನ್ನು ರಾಜ್ಯ ಸರ್ಕಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ದೇಶಕರ(ಭದ್ರತೆ ಮತ್ತು ವಿಚಕ್ಷಣೆ) ಹುದ್ದೆಗೆ ವರ್ಗಾವಣೆ ಮಾಡಿದೆ.