ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ ಬಿ ಪಾಟೀಲ್ ನೇಮಕ: ಕೋಟೆ ನಾಡಿನ ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಅಭಿನಂದನೆ.
1 min read
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಅಧ್ಯಕ್ಷರಾಗಿ ಎಂ ಬಿ ಪಾಟೀಲ್ ನೇಮಕ:
ಕೋಟೆ ನಾಡಿನ ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಅಭಿನಂದನೆ.
ಚಿತ್ರದುರ್ಗ ಹೊಯ್ಸಳ ನ್ಯೂಸ್/ ಬೆಂಗಳೂರು,
ಬೆಂಗಳೂರು:
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಂ ಬಿ ಪಾಟೀಲ್ ರವರನ್ನು ಕೋಟೆ ನಾಡಿನ ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಅಭಿನಂದಿಸಿದರು.
ಉತ್ತರ ಕರ್ನಾಟಕದಲ್ಲಿ ನೀರಾವರಿ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಮೂಲಕ ಜನರಿಂದ ಭಗೀರಥನೆಂಬ ಪ್ರೀತಿ, ಗೌರವಕ್ಕೆ ಪಾತ್ರರಾಗಿರುವ ರಾಜ್ಯದ ಭರವಸೆಯ ನಾಯಕರಾದ ಶ್ರೀ ಎಂ.ಬಿ.ಪಾಟೀಲ್ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುನ ಪಾಟೇಲ್ರನ್ನು ಚಿತ್ರದುರ್ಗದ ಮಾಜಿ ಸಂಸದರು ಹಾಗೂ ಕಾಂಗ್ರೆಸ್ ವಕ್ತರರಾದ ಬಿ.ಎನ್.ಚಂದ್ರಪ್ಪ,ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ, ಮಾಜಿ ಸಚಿವರಾದ ಡಿ.ಸುಧಾಕರ್ ಭೇಟಿ ಮಾಡಿ ಅಭಿನಂದಿಸಿದರು.