May 2, 2024

Chitradurga hoysala

Kannada news portal

ಶಾಂತಿಸಾಗರ ನೀರು ಸರಬರಾಜು ತಾತ್ಕಾಲಿಕವಾಗಿ ಫೆಬ್ರವರಿ 03 ರಿಂದ 09 ರವರೆಗೆ ಸ್ಥಗಿತ:ನಗರಸಭೆ ಪೌರಾಯುಕ್ತರು

1 min read


ಶಾಂತಿಸಾಗರ ನೀರು ಸರಬರಾಜು ತಾತ್ಕಾಲಿಕವಾಗಿ ಫೆಬ್ರವರಿ 03 ರಿಂದ 09 ರವರೆಗೆ ಸ್ಥಗಿತ:             ನಗರಸಭೆ ಪೌರಾಯುಕ್ತರು

ಚಿತ್ರದುರ್ಗಹೊಯ್ಸಳ ನ್ಯೂಸ್/ ಚಿತ್ರದುರ್ಗ,

ಚಿತ್ರದುರ್ಗ:
ಚಿತ್ರದುರ್ಗ ನಗರದ ಶಾಂತಿಸಾಗರ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ದುರಸ್ಥಿ ಕೆಲಸವನ್ನು ಕೈಗೊಳ್ಳುತ್ತಿರುವುದರಿಂದ ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಫೆಬ್ರವರಿ 03 ರಿಂದ 09 ರವರೆಗೆ ಸ್ಥಗಿತಗೊಳಿಸಲಾಗುತ್ತಿದೆ.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಉಪಯೋಗಿಸಲು ಕೋರಿದೆ. ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *