ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸಿದ್ದಾಪುರ ಜಿ.ಟಿ,ಸುರೇಶ್ ನೇಮಕ.
1 min read
ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ
ಸಿದ್ದಾಪುರ ಜಿ.ಟಿ,ಸುರೇಶ್ ನೇಮಕ.
ಚಿತ್ರದುರ್ಗ:
ಯುವ ಬಿಜೆಪಿ ಮುಖಂಡ ಸಿದ್ದಾಪುರ ಜಿ.ಟಿ,ಸುರೇಶ್ ಅವರು ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ(ಕುಡಾ) ದ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಜಿ.ಟಿ.ಸುರೇಶ್ ಅವರು ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ರಸ್ತೆಯ ಸಿದ್ದಾಪುರ ಗ್ರಾಮದವರಾಗಿದ್ದು ಉದ್ಯಮಿಯಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಹಲವು ವರ್ಷಗಳಿಂದ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಅವರು ತೊಡಗಿದ್ದಾರೆ.
ನಿಕಟಪೂರ್ವ ಅಧ್ಯಕ್ಷ ಬದರೀನಾಥ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಜಿ.ಟಿ.ಸುರೇಶ್ ಅವರನ್ನು ನೇಮಕ ಮಾಡಲಾಗಿದೆ. 2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಪಕ್ಷವು ಕಾರ್ಯಕರ್ತರು, ಪಕ್ಷದ ಮುಖಂಡರಿಗೆ ವಿವಿಧ ಹುದ್ದೆ ನೀಡುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಿದೆ.