April 16, 2024

Chitradurga hoysala

Kannada news portal

ವಿಕಲಚೇತನರ ಸಬಲೀಕರಣಕ್ಕಾಗಿ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

1 min read

ಚಿತ್ರದುರ್ಗ ಆ:8: 2020 ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಗಸ್ಟ್ 17 ಅರ್ಜಿ ಸಲ್ಲಿಸಲು ಕೊನೆಯ ದಿನ.ಅರ್ಜಿ ನಮೂನೆಗಳನ್ನು ಇಲಾಖೆಯಿಂದ ವೆಬ್‍ವಿಳಾಸ www.disabilityaffairs.gov.in ನಲ್ಲಿ ಪಡೆದು, ನಿಗದಿತ ನಮೂನೆಯಲ್ಲಿ ಆಂಗ್ಲ ಭಾಷೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಪ್ರಸ್ತಾವನೆಗಳನ್ನು ಆಗಸ್ಟ್ 17 ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚಿತ್ರದುರ್ಗ, ಈ ಕಚೇರಿಗೆ ತ್ರಿಪ್ರತಿಯಲ್ಲಿ ಸಲ್ಲಿಸಲು ಕೋರಿದೆ.

ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳು (ವೈಯಕ್ತಿಕ ವಿಭಾಗ), ಅರ್ಜಿದಾರರ, ವ್ಯಕ್ತಿಗಳ, ಸಂಸ್ಥೆಗಳ, ಸ್ವವಿವರ ಹಾಗೂ ಸಾಧನೆಗಳ ಸಾರಂಶ, ಪೂರಕ ದಾಖಲೆಗಳೊಂದಿಗೆ, ಡ್ರಾಫ್ಟ್ ಸೈಟೇಷನ್ (1 ಪುಟಕ್ಕೆ ಮೀರದಂತೆ) ಸಲ್ಲಿಸಬೇಕು.

 ಅರ್ಜಿ ನಮೂನೆಗಾಗಿ www.disabilityaffairs.gov.in ವೆಬ್‍ಸೈಟ್‍ನ್ನು ಸಂಪರ್ಕಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ: 08194-235286ನ್ನು ಸಂಪರ್ಕಿಸಬಹುದು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *