ನಾಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : ಕಣದಲ್ಲಿ ಒಟ್ಟು 4 ಸ್ಥಾನಗಳಿಗೆ 9 ಅಭ್ಯರ್ಥಿಗಳು.
1 min read
ನಾಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : ಕಣದಲ್ಲಿ ಒಟ್ಟು 4 ಸ್ಥಾನಗಳಿಗೆ 9 ಅಭ್ಯರ್ಥಿಗಳು.
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಿತ್ರದುರ್ಗ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಹಾಗೂ ಜಿಲ್ಲಾ ಘಟಕಕ್ಕೆ 2022-2025 ರ ಅವಧಿಗೆ ಚುನಾವಣೆ ನಡೆಯುತ್ತಿದ್ದು ಚುನಾವಣಾ ಅಂತಿಮ ಕಣದಲ್ಲಿ ಒಂದು ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು. ಒಂದು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು. ಒಂದು ಖಜಾಂಚಿ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು. ಹಾಗೂ ಒಂದು ರಾಜ್ಯ ಸಮಿತಿ ಸದಸ್ಯರ ಸ್ಥಾನಕ್ಕೆ ಮೂರು ಅಭ್ಯರ್ಥಿಗಳು ಒಟ್ಟು 9 ಜನ ಕಣದಲ್ಲಿ ಇದ್ದಾರೆ. ವಿವರ
ಜಿಲ್ಲಾ ಘಟಕದ ಅಧ್ಯಕ್ಷರ ಸ್ಥಾನಕ್ಕೆ ದಿನೇಶ್ ಗೌಡಗೆರೆ, ನರೇನಹಳ್ಳಿ ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಎಸ್.ಸಿದ್ದರಾಜು, ಸಿ.ಹೆಂಜಾರಪ್ಪ, ಖಜಾಂಚಿಗೆ ಕುಮಾರಸ್ವಾಮಿ.ಡಿ, ಮೇಘಗಂಗಾಧರನಾಯ್ಕ, ರಾಜ್ಯ ಸಮಿತಿ ಸದಸ್ಯರ ಸ್ಥಾನಕ್ಕೆ ಹೆಚ್.ಲಕ್ಷ್ಮಣ್, ಎಂ.ಯೋಗೀಶ, ಟಿ.ತಿಪ್ಪೇಸ್ವಾಮಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಈ ಸ್ಥಾನಗಳಿಗೆ ಮತದಾನವು ಪೆಭ್ರವರಿ 27 ಭಾನುವಾರ ರಂದು ಬೆಳಗ್ಗೆ 10 ಗಂಟೆ ಯಿಂದ ಮಧ್ಯಹ್ಹ 3 ಗಂಟೆಯ ವರೆಗೆ ಮತದಾನ ನಡೆಯಲಿದೆ ನಂತರ ಮತ ಎಣ್ಣಿಕ್ಕೆ ಪ್ರಾರಂಭ ಆಗುವುದು.