ದ್ವಿತೀಯ ಪಿಯುಸಿ ಪರೀಕ್ಷೆ: 302 ವಿದ್ಯಾರ್ಥಿಗಳು ಗೈರು
1 min readದ್ವಿತೀಯ ಪಿಯುಸಿ ಪರೀಕ್ಷೆ: 302 ವಿದ್ಯಾರ್ಥಿಗಳು ಗೈರು
ಚಿತ್ರದುರ್ಗ :
ಏಪ್ರಿಲ್ 22ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವ್ಯವಹಾರ ಅಧ್ಯಯನ ವಿಷಯದಲ್ಲಿ 4445 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 4151 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 294 ವಿದ್ಯಾರ್ಥಿಗಳು ಗೈರಾಗಿದ್ದಾರೆ. ತರ್ಕಶಾಸ್ತ್ರ ವಿಷಯದಲ್ಲಿ 59 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 8 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ 22 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಯಾವುದೇ ಡೀಬಾರ್ ಪ್ರಕರಣ ಇರುವುದಿಲ್ಲ.
ಏಪ್ರಿಲ್ 23ರಂದು ಗಣಿತ, ಶಿಕ್ಷಣಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಸಿ.ಶೋಭಾ ತಿಳಿಸಿದ್ದಾರೆ.