ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಆರ್ ಎಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಬೇಟಿ
1 min readಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಆರ್ ಎಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಬೇಟಿ
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಿತ್ರದುರ್ಗ:
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ,ಮುಖ್ಯಸ್ಥ ಮೋಹನ್ ಭಾಗವತ್ ರವರು ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಜುಲೈ ೧೧ ರ ಸೋಮವಾರ ಸಂಜೆ ಆಗಮಿಸಲಿದ್ದು ಹಿಂದುಳಿದ,ದಲಿತ ಮಠಾಧೀಶರ ಒಕ್ಕೂಟದೊಂದಿಗೆ ಚರ್ಚೆ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ನಿಗದಿಯಾಗಿರುವ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸುತ್ತಿರುವ ಅವರು ಸೋಮವಾರ ಸಂಜೆ ಚಿತ್ರದುರ್ಗಕ್ಕೆ ಬರಲಿದ್ದು, ರಾತ್ರಿ ಮಾದರ ಚನ್ನಯ್ಯ ಮಠದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಜುಲೈ 12 ರ ಮಂಗಳವಾರ ಮಧ್ಯಾಹ್ನ ಬೆಂಗಳೂರಿಗೆ ಮರಳಲಿದ್ದಾರೆ. ಆರ್ ಎಸ್ ಎಸ್ ಸಹ ಸರಕಾರ್ಯವಾಹಕ ರುಗಳು ಜೊತೆಗೆ ಇರಲಿದ್ದಾರೆ. ಆರ್ ಎಸ್ ಎಸ್ ಮುಖ್ಯಸ್ಥರ ಭೇಟಿಯು ಸಂಪೂರ್ಣವಾಗಿ ಖಾಸಗಿಯಾಗಿರುತ್ತದೆ. ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು. ಮಠಕ್ಕೆ ಸೂಕ್ತ ಭದ್ರತೆ ಒದಗಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ