April 27, 2024

Chitradurga hoysala

Kannada news portal

ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಆರ್ ಎಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಬೇಟಿ

1 min read


ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ                            ಆರ್ ಎಸ್ಸೆಸ್ ಮುಖ್ಯಸ್ಥ         ಮೋಹನ್ ಭಾಗವತ್ ಬೇಟಿ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಚಿತ್ರದುರ್ಗ:

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ,ಮುಖ್ಯಸ್ಥ ಮೋಹನ್‌ ಭಾಗವತ್ ರವರು ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಜುಲೈ ೧೧ ರ ಸೋಮವಾರ ಸಂಜೆ ಆಗಮಿಸಲಿದ್ದು ಹಿಂದುಳಿದ,ದಲಿತ ಮಠಾಧೀಶರ ಒಕ್ಕೂಟದೊಂದಿಗೆ ಚರ್ಚೆ ನಡೆಸಲಿದ್ದಾರೆ.

ಬೆಂಗಳೂರಿನಲ್ಲಿ ನಿಗದಿಯಾಗಿರುವ ಆರ್ ಎಸ್‌ ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸುತ್ತಿರುವ ಅವರು ಸೋಮವಾರ ಸಂಜೆ ಚಿತ್ರದುರ್ಗಕ್ಕೆ ಬರಲಿದ್ದು, ರಾತ್ರಿ ಮಾದರ ಚನ್ನಯ್ಯ ಮಠದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಜುಲೈ 12 ರ ಮಂಗಳವಾರ ಮಧ್ಯಾಹ್ನ ಬೆಂಗಳೂರಿಗೆ ಮರಳಲಿದ್ದಾರೆ. ಆರ್ ಎಸ್ ಎಸ್ ಸಹ ಸರಕಾರ್ಯವಾಹಕ ರುಗಳು ಜೊತೆಗೆ ಇರಲಿದ್ದಾರೆ. ಆರ್ ಎಸ್ ಎಸ್ ಮುಖ್ಯಸ್ಥರ ಭೇಟಿಯು ಸಂಪೂರ್ಣವಾಗಿ ಖಾಸಗಿಯಾಗಿರುತ್ತದೆ. ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು. ಮಠಕ್ಕೆ ಸೂಕ್ತ ಭದ್ರತೆ ಒದಗಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ

About The Author

Leave a Reply

Your email address will not be published. Required fields are marked *