April 20, 2024

Chitradurga hoysala

Kannada news portal

ಇತರೆ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುತ್ತಿರುವ ಉಚಿತ ಸೌಲಭ್ಯಗಳನ್ನು ಹಿಂದುಳಿದ ವರ್ಗದ ಕಡುಬಡುವ ವಿದ್ಯಾರ್ಥಿಗಳಿಗೂ ನೀಡಿ : ಎನ್.ಡಿ.ಕುಮಾರ್

1 min read

ಹಿಂದುಳಿದ ವರ್ಗಗಳಲ್ಲಿ ಕಡುಬಡವರು ಇದ್ದು ಎಷ್ಟೋ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ

ಶೈಕ್ಷಣಿಕವಾಗಿ ಪ್ರಗತಿ ಕಾಣಲು ಸರ್ಕಾರದಿಂದ ಉಚಿತವಾಗಿ ಶಿಕ್ಷಣ ನೀಡಬೇಕು: ಎನ್.ಡಿ.ಕುಮಾರ್

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಚಿತ್ರದುರ್ಗ:

ಇತರೆ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿದಂತೆ ಓಬಿಸಿ ಸಮುದಾಯದ ಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಸೇರಿದಂತೆ ಇನ್ನಿತರೆ ಸವಲತ್ತು ಒದಗಿಸಿ ಎಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ನ ಹಿಂದುಳಿದ ವರ್ಗಗಳ ಅಧ್ಯಕ್ಷ ಎನ್.ಡಿ.ಕುಮಾರ್ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಎನ್.ಡಿ.ಕುಮಾರ್ ಹಿಂದುಳಿದ ವರ್ಗಗಳಿಗೆ ಸೂಕ್ತವಾದ ಸರ್ಕಾರದ ಯೋಜನೆಗಳು ಅನುಕೂಲವಾಗುವ ರೀತಿಯಲ್ಲಿ ನೀಡಬೇಕು ಹಿಂದುಳಿದ ವರ್ಗಗಳಲ್ಲಿಯೇ ಅತ್ಯಂತ ಹಿಂದುಳಿದ ಜಾತಿಗಳನ್ನು ಗುರುತಿಸಿ ಶೈಕ್ಷಣಿಕವಾಗಿ ಪ್ರಗತಿ ಕಾಣಲು ಸರ್ಕಾರದಿಂದ ಉಚಿತವಾಗಿ ಶಿಕ್ಷಣ ನೀಡಬೇಕು.

ಈಗಾಗಲೇ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸು ಹಾಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಎಪ್ಪತ್ತೈದು ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಿದ್ದೀರಿ ಹೀಗಾಗಿ ಹಿಂದುಳಿದ ವರ್ಗದವರಿಗೂ ಕೂಡ ಈ 1ಸೌಲಭ್ಯವನ್ನು ನೀಡಬೇಕು ಎಂದು ಎನ್ ಡಿ ಕುಮಾರ್ ಒತ್ತಾಯಿಸಿದ್ದಾರೆ.

ಹಿಂದುಳಿದ ವರ್ಗಗಳಲ್ಲಿ ಕಡುಬಡವರು ಇದ್ದು ಎಷ್ಟೋ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಅವರಿಗೆ ಯಾವುದೇ ಶಾಲೆ ಕಾಲೇಜುಗಳಲ್ಲಿ ಶುಲ್ಕವನ್ನು ತೆಗೆದುಕೊಳ್ಳದೆ ಉಚಿತ ಶಿಕ್ಷಣ ನೀಡಬೇಕು ಜೊತೆಗೆ ಉಚಿತ ಬಸ್ ಪಾಸ್ ನೀಡಬೇಕು. ಅದೇ ರೀತಿ ಹಿಂದುಳಿದ ವರ್ಗಗಳ ಎಲ್ಲಾ ಜಾತಿಯ ವರ್ಗಗಳ ದವರೆಗೆ ನೀಡುವ ಸವಲತ್ತುಗಳನ್ನು ನೀಡಬೇಕು ಹಾಗೆ ವಿದ್ಯಾರ್ಥಿವೇತನ ಮತ್ತು ವಸತಿ ನಿಲಯದಲ್ಲೂ ಕೂಡ ಸರಿಯಾದ ರೀತಿಯಲ್ಲಿ ನ್ಯಾಯ ಒದಗಿಸುವಂತೆ ಎನ್ಡಿ. ಕುಮಾರ್ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ

About The Author

Leave a Reply

Your email address will not be published. Required fields are marked *