May 3, 2024

Chitradurga hoysala

Kannada news portal

ಜಯ ನಮ್ಮದೇ : ಅಭ್ಯರ್ಥಿ ಎನ್ ವೈ ಗೋಪಾಲಕೃಷ್ಣ

1 min read


ಜಯ ನಮ್ಮದೇ

ವರದಿ: ಅಜ್ಜೇರ ತಿಪ್ಪೇಸ್ವಾಮಿ

ಮೊಳಕಾಲ್ಮೂರು:
ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎನ್. ವೈ. ಗೋಪಾಲಕೃಷ್ಣ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಸಾವಿರಾರು ಕಾರ್ಯಕರ್ತರೊಂದಿಗೆ ಮೊಳಕಾಲ್ಮೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ತಾಲ್ಲೂಕು ಆಡಳಿತ ಸೌಧಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಜಯ ನಮ್ಮದೇ:

ಉಮೇದುವಾರಿಕೆ ಸಲ್ಲಿಸಿದ‌ ನಂತರ ಮಾತನಾಡಿದ ಅಭ್ಯರ್ಥಿ ಎನ್ ವೈ ಗೋಪಾಲಕೃಷ್ಣ, ಕಾಂಗ್ರೆಸ್ ಪಕ್ಷವು ಮೂಲತ ಸಾಮಾನ್ಯ ಕಾರ್ಯಕರ್ತರ ಪಕ್ಷವಾಗಿದ್ದು. ನಾನೂ ಕೂಡ ಈ ಕ್ಷೇತ್ರವನ್ನು ನಾಲ್ಕು ಬಾರಿ ಪ್ರತಿನಿಧಿಸಿ ಶಾಸಕನಾಗಿ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದೇನೆ.
ಹಾಗೂ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರ ಮಧ್ಯೆ ಇದ್ದ ಗೊಂದಲ ಬಗೆಹರಿದಿದ್ದು. ಕಾಂಗ್ರೆಸ್ ಪಕ್ಷದ ಗೆಲುವಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿಸಿದರು.

About The Author

Leave a Reply

Your email address will not be published. Required fields are marked *