ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಂದನ ಹೊಸೂರು ಮುರುಘೇಂದ್ರಪ್ಪ.
1 min read
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಂದನ ಹೊಸೂರು ಮುರುಘೇಂದ್ರಪ್ಪ.
ಹೊಳಲ್ಕೆರೆ:
ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಹಿರಿಯ ಮುಖಂಡರು ಹಾಗೂ ಹೊಳಲ್ಕೆರೆ ಪಿ.ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷರಾದ ಶ್ರೀ ಮುರುಘೇಂದ್ರಪ್ಪ ಹಾಗೂ ಎಂ.ಎಂ ಸಚಿನ್ ರವರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್ ಆಂಜನೇಯ,ಮಾಜಿ ಶಾಸಕ ಎವಿ.ಉಮಾಪತಿ ಹಾಗೂ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಕಾಟಿಹಳ್ಳಿ ಶಿವಕುಮಾರ್,ಮಾಜಿ ಜಿ. ಪಂ ಸದಸ್ಯರಾದ ಎಸ್.ಜೆ.ರಂಗಸ್ವಾಮಿ ಇವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಲು ಹಾಕುವುದರ ಮೂಲಕ ಪಕ್ಷಕ್ಕೆ ಸೇರ್ಪಡೆಗೊಳ್ಳಿಸಿದರು.