May 17, 2024

Chitradurga hoysala

Kannada news portal

ಅಮೃತಾಪುರ ಗ್ರಾಮದಲ್ಲಿ:ಮಾಜಿ ಶಾಸಕ ಎವಿ.ಉಮಾಪತಿ,ಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್ ಅಬ್ಬರದ ಪ್ರಚಾರ

1 min read

ಜನಾಶೀರ್ವಾದ ಯಾತ್ರೆ ; ಅಮೃತಾಪುರ ಗ್ರಾಮದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ,ಮಾಜಿ ಶಾಸಕ ಎವಿ.ಉಮಾಪತಿ,ಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್ ರವರಿಂದ ಅಬ್ಬರದ ಮತಯಾಚನೆ, ಗ್ರಾಮಸ್ಥರಿಂದ ರಸ್ತೆಯುದ್ದಕ್ಕೂ ಹೂಮಳೆ ಸುರಿಸಿ ಭರ್ಜರಿ ಸ್ವಾಗತ

ಹೆಚ್.ಡಿ.ಪುರ ಜಿ.ಪಂ. ವ್ಯಾಪ್ತಿಯ ಅಮೃತಾಪುರ ಗ್ರಾಮದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ ಅವರು ಶುಕ್ರವಾರ ಅಬ್ಬರದ ಮತ ಪ್ರಚಾರ ನಡೆಸಿದರು.

ಗ್ರಾಮದ ಮುಖ್ಯ ರಸ್ತೆಯಲ್ಲಿ ಸಂಚರಿಸಿದ ಮಾಜಿ ಸಚಿವರನ್ನು ಗ್ರಾಮಸ್ಥರು ಅಭಿಮಾನಿಗಳು ರಸ್ತೆಯುದ್ದಕ್ಕೂ ಹೂಮಳೆ ಸುರಿಸಿ, ಆರತಿ ಎತ್ತಿ, ಪಟಾಕಿ ಸಿಡಿಸಿ ಸ್ವಾಗತಿಸಿದರು.

ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆ ಬಿಜೆಪಿ ಗೆ ತಕ್ಕ ಪಾಠ ಕಲಿಸಬೇಕೆಂದು ಕರೆ ಕೊಟ್ಟ ಮಾಜಿ ಸಚಿವರು ಎಲ್ಲರೂ ತಪ್ಪದೇ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವಂತೆ ಮನವಿ ಮಾಡಿದರು.ಮಾಜಿ ಶಾಸಕ ಎವಿ.ಉಮಾಪತಿ ಮಾತನಾಡಿ ಭದ್ರಾ ಮೇಲ್ದಂಡೆ ಯೋಜನೆಗಾಗಿ ಬಹಳಷ್ಟು ಮಂದಿ ಹೋರಾಟ ನಡೆಸಿದ ಫಲ ಯೋಜನೆ ಜಾರಿಗೊಂಡಿತು. ಆದರೆ, ಹೊಳಲ್ಕೆರೆ ತಾಲೂಕು ಕೈಬಿಟ್ಟು ಹೋಗಿತ್ತು. ತಕ್ಷಣ ಅಂದಿನ ಸಿಎಂ ಸಿದ್ದರಾಮಯ್ಯ ಮೇಲೆ ಒತ್ತಡ ತಂದು, ಕ್ಷೇತ್ರವನ್ನು ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಸೇರಿಸಿದರು. ಜೊತೆಗೆ ಸಾವಿರಾರು ಕೊಳವೆಬಾವಿ ಕೊರೆಯಿಸಿ, ಬರಡುಭೂಮಿಗಳು ತೋಟಗಳಾಗಿ ಮಾರ್ಪಾಡು ಆಗುವ ರೀತಿ ಕಾರ್ಯನಿರ್ವಹಿಸಿದರು ಎಂದು ತಿಳಿಸಿದರು.

About The Author

Leave a Reply

Your email address will not be published. Required fields are marked *