May 2, 2024

Chitradurga hoysala

Kannada news portal

ವಿಶೇಷ ಚೇತನರಿಗೆ ಸರ್ಕಾರದ ಸೌಲಭ್ಯಗಳ ನೀಡಬೇಕೆಂದು ಪ್ರತಿಭಟನೆ

1 min read

ವಿಶೇಷ ಚೇತನರಿಗೆ ಸರ್ಕಾರದ ಸೌಲಭ್ಯಗಳ ನೀಡಬೇಕೆಂದು ಪ್ರತಿಭಟನೆ

ವರದಿ:ಆನಂದ.ಡಿ ಆಲಘಟ್ಟ

ಚಿತ್ರದುರ್ಗಹೊಯ್ಸಳ ನ್ಯೂಸ್/

ಚಿತ್ರದುರ್ಗ: ಜೂನ್ 27

ರಾಜ್ಯಾದ್ಯಂತ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಸಂಚರಿಸಲು ಪಾಸ್ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ದಿ ಸಂಘ ಹಾಗೂ ಶ್ರೀ ಮಂಜುನಾಥ ವಿಕಲಚೇತನರ ಕ್ಷೇಮಾಭಿವೃದ್ದಿ ಸೇವಾ ಸಂಘದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳು ಈ ಮನವಿ ಸಲ್ಲಿಸಲಾಯಿತು.

ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ವಿಶೇಷ ಚೇತನರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.
ವಿಶೇಷ ಚೇತನರಿಂದ 660 ರೂ.ಗಳನ್ನು ಪಡೆದು ನೂರು ಕಿ.ಮೀ.ವ್ಯಾಪ್ತಿಯೊಳಗೆ ಸಂಚರಿಸಲು ರಾಜ್ಯ ಸರ್ಕಾರ ಅವಕಾಶ ಮಾಡಿದೆ. ಅಂಗವಿಕಲರು ಆರ್ಥಿಕವಾಗಿ ಹಿಂದುಳಿದಿರುವುದರಿಂದ ಉಚಿತ ಸಂಚಾರಕ್ಕೆ ಬಸ್‍ಪಾಸ್ ವಿತರಿಸಬೇಕೆಂದರು.

ಪ್ರತಿ ತಿಂಗಳ ಮಾಶಾಸನವನ್ನು ಮೂರು ಸಾವಿರದಿಂದ ಐದು ಸಾವಿರಕ್ಕೆ ಹೆಚ್ಚಿಸಬೇಕು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂ, ತಾಲ್ಲೂಕು ಪಂ,ಜಿಲ್ಲಾ ಪಂಚಾಯಿತಿಗಳಲ್ಲಿ ವಿಶೇಷ ಚೇತನರಿಗೆ ಶೇ.ಐದರಷ್ಟು ಅನುದಾನ ಜಾರಿಯಲ್ಲಿದ್ದರೂ ಅಂಗವಿಕಲರಿಗೆ ತಲುಪುತ್ತಿಲ್ಲ, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ವಸತಿ ನಿಗಮಗಳ ಯೋಜನೆಗಳಲ್ಲಿ ವಿಶೇಷ ಚೇತನರಿಗೆ ಕಡ್ಡಾಯವಾಗಿ ವಸತಿ ಸೌಲಭ್ಯ ಒದಗಿಸಬೇಕು.
ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಎಲ್ಲಾ ಇಲಾಖೆಗಳಲ್ಲಿ ವಿಶೇಷಚೇತನರಿಗೂ ಉದ್ಯೋಗ ಸಿಗಬೇಕು ಒತ್ತಾಯಿಸಿದರು.

ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಸಭೆ ಕರೆದು ವಿಶೇಷ ಚೇತನರ ಕುಂದು ಕೊರತೆಗಳನ್ನು ಆಲಿಸಬೇಕೆಂಬ ಸರ್ಕಾರದ ಆದೇಶವಿದ್ದರೂ ಇದುವರೆವಿಗೂ ಸಭೆ ಕರೆದಿಲ್ಲ. ಹಾಗಾಗಿ ಇನ್ನು ಮುಂದೆ ಪ್ರತಿ ತಿಂಗಳು ಸಭೆ ಕರೆಯುವಂತೆ ತಿಳಿಸಿದರು.

ಶ್ರೀ ಮಂಜುನಾಥ ವಿಕಲಚೇತನರ ಕ್ಷೇಮಾಭಿವೃದ್ದಿ ಸೇವಾ ಸಂಘದ ಅಧ್ಯಕ್ಷ ಟಿ.ಬಿ.ಮಾರುತಿ, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ನಾಗರಾಜ್, ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಪಾಪಯ್ಯ, ಜೈಪ್ರಕಾಶ್,ದಲಿತ ಮುಖಂಡ ಬಿ.ರಾಜಪ್ಪ,ಗಣೇಶ್, ಜಾನಪದ ಜಾಗೃತಿ ಪರಿಷತ್ ಅಧ್ಯಕ್ಷ ಹೆಚ್.ಪ್ಯಾರೇಜಾನ್ ಹಾಗೂ ಅನೇಕ ವಿಶೇಷ ಚೇತನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *